ಬೆಂಗಳೂರು: ಶಿವಮೊಗ್ಗ ಲೋಕಸಭಾ ಚುನಾವಣಾ ಸೋಲಿನ ಬಳಿಕ ಜೆಡಿಎಸ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ, ಇದೀಗ ಜೆಡಿಎಸ್ ತೆರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ವಿಶ್ವಾಸ ಜೆಡಿಎಸ್ ಕಳೆದುಕೊಂಡಿದೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದ ಮಧು ಬಂಗಾರಪ್ಪ , ಇದೀಗ ಜೆಡಿಎಸ್ ತೊರೆಯುವುದು ಪಕ್ಕವಾಗಿದೆ. ಜೆಡಿಎಸ್ ತೊರೆದು ಕಾಂಗ್ರೆಸ್ ಮನೆಗೆ ಕಾಲಿಡುವ ಕಾಲ ಕೂಡಿ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಇಂದ ಕೆಲ ಕಾಲ ಮಧುಬಂಗಾರಪ್ಪ ಸಮಾಲೋಚನೆ ನಡೆಸಿದರು.
ಮಧು ಬಂಗಾರಪ್ಪ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಮುಂದಿನ ವಾರದಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಡಿಕೆಶಿ ತಿಳಿಸಿದರು. ನನ್ನ ಮಗಳ ಮದುವೆ ಮುಗಿದ ಬಳಿಕ ಪಕ್ಷ ಸೇರ್ಪಡೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಹೇಳಿದರು.



