ತಲೆಕೆಟ್ಟು ಹುಚ್ಚು ಹಿಡಿದು ಏನೇನೋ ಮಾತಾಡ್ತಾರೆ; ಅಂಥವರನ್ನು ದೂರ ಇಡಬೇಕು; ಲಿಂಗಾಯತ ಸಮುದಾಯ ಬಗ್ಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಕಿಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಕೋಲಾರ: ತಲೆಕೆಟ್ಟು ಹುಚ್ಚು ಹಿಡಿದು ಕೆಲವರು ಏನೇನೋ ಮಾತನಾಡುತ್ತಿದ್ದಾರೆ. ಅಂಥವರನ್ನು ಸರ್ಕಾರ ಸ್ವಲ್ಪ ದೂರ ಇಡಬೇಕು ಎಂದು‌ ಶಾಸಕ ಕೊತ್ತೂರು ಮಂಜುನಾಥ್ ಕಿಡಿಕಾರಿದ್ದಾರೆ. ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಧ್ವನಿ ಎತ್ತಿದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿರುದ್ಧ ಈ ರೀತಿಯಾಗಿ ಮಾತನಾಡಿದ್ದಾರೆ‌.

ಸುದ್ದಿಗಾರರೊಂದಿಗೆ ಮಾತನಾಡಿ, ಯಾರ್ಯಾರಿಗೋ ಏನು ತಲೆ ಕೆಟ್ಟು ಹುಚ್ಚು ಹಿಡಿದು ಮಾತನಾಡುತ್ತಿದ್ದಾರೆ. 136 ಶಾಸಕರು ಕಾಂಗ್ರೆಸ್‌ ಪಕ್ಷದಿಂದ ಗೆದಿದ್ದಾರೆ. ಸರ್ಕಾರ ಸುಭಿಕ್ಷೆಯಾಗಿ ನಡೆದುಕೊಂಡು ಹೋಗುತ್ತಿದೆ. ಶಾಸಕರಿಗೆ ಮಾತನಾಡುವ ಆಸಕ್ತಿ ಇದ್ದರೆ, ನಿಮ್ಮ ತಾಲೂಕಿನ ಅಭಿವೃದ್ದಿ ಬಗ್ಗೆ ಮಾತ‌ನಾಡಿ. ತಾಲ್ಲೂಕಿನ ಜನರ ಕಷ್ಟಗಳು, ಶಿಕ್ಷಣ, ಆಸ್ಪತ್ರೆ, ಉದ್ಯೋಗ, ರೈತರ ಬಗ್ಗೆ ಮಾತನಾಡಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹತ್ತಿರ ಹೋಗಿ ಸರ್ಕಾರದ ಮಟ್ಟದಲ್ಲಿ‌ ಹೋಗಿ ಕೆಲಸ ಮಾಡಿಸಿಕೊಳ್ಳಿ ಎಂದು ವಾಗ್ದಾಳಿ ಮಾಡಿದರು.

ತೀಟೆಗಳು ಮಾಡುವುದು, ಪಿನ್​ಗಳಲ್ಲಿ ಚುಚ್ಚುವರನ್ನು ಪಕ್ಷದಿಂದ ಸ್ವಲ್ಪ ದೂರವಿಡಿ. ಮಂತ್ರಿ ಬೇಕು, ಸಿಎಂ ಬೇಕು ಎಂದು ಕೇಳಿದರೇ, ನನಗೂ ಪಿಎಂ‌ ಆಗಬೇಕು ಅಂತ ಆಸೆ ಇದೆ. ಕೈ ಎಲ್ಲಿಯವರೆಗೂ ಹೋಗತ್ತೆ ಅಲ್ಲಿಯವರೆಗು‌ ಚಾಚಬೇಕು. ಕೆಲಸ ಮಾಡಬೇಕೆಂಬ ಆಸಕ್ತಿ ಇದ್ದರೇ ತಾಲೂಕಿನಲ್ಲಿ ಮಾಡಿ. ನಮ್ಮ ಜಾತಿ ಸಿಎಂ ಆಗಬೇಕು, ಈ‌ ಜಾತಿ ಸಿಎಂ ಆಗಬೇಕು ಎಂಬುವುದನ್ನು ಬಿಡಿ. ತಲೆ ಕೆಟ್ಟವರ ರೀತಿ ಮತನಾಡಬೇಡಿ.

ನಾನು ನಿನ್ನೆ ಮುಖ್ಯಮಂತ್ರಿ ಬಳಿ ಹೋಗಿದ್ದೆ. ಬೆಂಗಳೂರಿನಲ್ಲಿ ಅಡ್ಡಾಡಬೇಡಿ, ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡಲು’ ಸೂಚಿಸಿದರು. ಅವರು ಸರಿಯಾಗಿಯೇ ಹೇಳಿದ್ದಾರೆ. ಅದನ್ನು ಬಿಟ್ಟು ಮಂತ್ರಿ ಬೇಕು, ಮುಖ್ಯಮಂತ್ರಿ ಬೇಕು ಎಂದು ಕೇಳುತ್ತಿದ್ದರೆ ಪ್ರಯೋಜನವಿಲ್ಲ. ನನಗೂ ಹಲವಾರು ಆಸೆಗಳಿವೆ. ಗೊತ್ತಿದ್ದರೆ ತೆಂಗಿನ ಮರ ಹತ್ತಬೇಕು. ಗೊತ್ತಿಲ್ಲದೇ ಹತ್ತಲು ಹೋದರೆ ಬಿದ್ದು ಕೈಕಾಲು ಮುರಿದುಕೊಳ್ಳುತ್ತೇವೆ ಎಂದರು.

 

 

ಈಗಿನ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಸಮಾಜದ ಅಧಿಕಾರಿಗಳು ಮೂಲೆ ಗುಂಪು;‌ ಹಿರಿಯ ಶಾಸಕ ಶಾಮನೂರು‌ ಶಿವಶಂಕರಪ್ಪ ಬೇಸರ

ಲಿಂಗಾಯತ ಸಮುದಾಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ; ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿರೋದು; ನಿಮಗೆ 7 ಮಂತ್ರಿ ಸ್ಥಾನ ಕೊಟ್ಟಿದೆ, ಇನ್ನೆಷ್ಟು ಕೊಡಬೇಕು..?

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *