ಸದಾ ಬೆನ್ನಿಗೆ ಚೂರಿ ಇರೀತ್ತಿದ್ದವರಿಗೆ ಈಗ ನೋವು ಗೊತ್ತಾಗಿದೆ; ಎಚ್. ವಿಶ್ವನಾಥ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮೈಸೂರು : ಸದಾ ಬೆನ್ನಿಗೆ ಚೂರಿ ಇರೀತಿದ್ದವರಿಗೆ ಈಗ ನೋವು ಗೊತ್ತಾಗಿದೆ. ಬೇರೆಯವರ ಬೆನ್ನಿಗೆ ಚೂರಿ ಇರಿದು ಸಂತೋಷಿಯಾಗಿದ್ದವನಿಗೆ ಈಗ ನೋವಾಗ್ತಾ ಇದೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಬಿಜೆಪಿ, ಜೆಡಿಎಸ್ ವಿರೋಧ ಪಕ್ಷಗಳು ನಿಮ್ಮನ್ನು ಸೋಲಿಸಿದ್ರಾ ..?  ನಿಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿತ್ತಾ? ಡಾ.ಜಿ.ಪರಮೇಶ್ವರ್‌ ಅವರನ್ನು ಸೋಲಿಸಿದಾಗ ಅದು  ಗೊತ್ತಾಗಲಿಲ್ವಾ? ಡಾ.ಜಿ.ಪರಮೇಶ್ವರ್‌ರನ್ನು ಸೋಲಿಸಿದವರು ಯಾರೆಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಸಿದ್ದರಾಮಯ್ಯ ತನ್ನ ಕೋಳಿ ಕೂಗಿದ್ರೆ ಬೆಳಕಾಗೋದು ಅಂದುಕೊಂಡಿದ್ದಾರೆ. ಆದರೆ, ಅವರ ಕೋಳಿ ಕೂಗದೇ ಇದ್ದರೂ ಬೆಳಕಾಗುತ್ತದೆ. ಅನೇಕ ವಿಚಾರದಲ್ಲಿ ಕಾನೂನು ಮಾತನಾಡುವ ಅವರು, ಜಾರ್ಜ್ ಹೆಸರಿನಲ್ಲಿ ಮನೆ ತಗೊಂಡು ಇದ್ದಾರಲ್ಲಾ ಇವರೆಂಥ ಆಸೆಬುರುಕರು ಎಂಬುದಾಗಿ ಸಿಎಂ ಅಧಿಕೃತ ನಿವಾಸ ಕೃಷ್ಣಾ ಖಾಲಿ ಮಾಡದ್ದರ ಬಗ್ಗೆ ಸಿದ್ದರಾಮಯ್ಯಗೆ ಇರೋವಷ್ಟು ಹೊಟ್ಟೆಕಿಚ್ಚು ಜಗತ್ತಿನಲ್ಲೇ ಯಾರಿಗೂ ಇಲ್ಲ ಎಂದು ಹೇಳಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *