ಬೆಂಗಳೂರು: ದಾವಣಗೆರೆ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರಿಗೆ ಈಗ ಚಿಕ್ಕಮಗಳೂರು ಜಿಲ್ಲೆಯ ಹೊಣೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಈ ಹಿಂದೆ ಕೆ.ಎಸ್ ಈಶ್ವರಪ್ಪ ಸಚಿವರಾಗಿದ್ದಾಗ ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ನೀಡಲಾಗಿತ್ತು. ಈಶ್ವರಪ್ಪ ರಾಜೀನಾಮೆ ನಂತರ ಇದೀಗ ಭೈರತಿ ಬಸವರಾಜ ಅವರಿಗೆ ಮತ್ತೊಂದು ಜಿಲ್ಲೆ ಹೊಣೆ ನೀಡಲಾಗಿದೆ. ಇದೀಗ ಜಿಲ್ಲೆಯಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು ಪರಿಹಾರ ಕಾರ್ಯ ಕೈಗೊಳ್ಳಬೇಕಿರುವುದರಿಂದ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.



