Connect with us

Dvgsuddi Kannada | online news portal | Kannada news online

ತಮ್ಮ ವಿರುದ್ದ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಹೈಕೋರ್ಟ್ ಮೊರೆ ಹೋದ ಮಿತ್ರಮಂಡಳಿ 6 ಸಚಿವರು ಹೇಳಿದ್ದೇನೆ ..?

ಪ್ರಮುಖ ಸುದ್ದಿ

ತಮ್ಮ ವಿರುದ್ದ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಹೈಕೋರ್ಟ್ ಮೊರೆ ಹೋದ ಮಿತ್ರಮಂಡಳಿ 6 ಸಚಿವರು ಹೇಳಿದ್ದೇನೆ ..?

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ಆಗುತ್ತಿದ್ದಂತೆ ಎಚ್ಚರಗೊಂಡ ಮಿತ್ರಮಂಡಳಿ  6 ಸಚಿವರು ತಮ್ಮ ವಿರುದ್ಧ ಯಾವುದೇ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈ ಕುರಿತಂತೆ ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಇದೇನು ಮೊದಲೇನು ಅಲ್ಲ. ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಜೀವನ ಬಲಿಯಾಗಬಾರದು ಎನ್ನುವ ಕಾರಣಕ್ಕಾಗಿ ಈ ಹಿಂದೆಯೋ ಕೋರ್ಟ್ ಮೊರೆ ಹೋಗಲಾಗಿದೆ. ಈಗಾಗಲೇ 22 ಮಾಜಿ, ಹಾಲಿ ಸಚಿವರು, ಶಾಸಕರು ಕೋರ್ಟ್ ಮೊರೆ ಹೋಗಿ ಮಾಧ್ಯಮಗಳಲ್ಲಿ ತಮ್ಮ ವಿರುದ್ಧದ ಯಾವುದೇ ಸುದ್ದಿ ಪ್ರಸಾರವಾಗದಂತೆ ಆದೇಶ ಪಡೆದಿದ್ದಾರೆ. ಈಗ ನಾವು ಪಡೆಯಲು ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಕೃಷಿ ಸಚಿವ ಬಿಸಿ ಪಾಟೀಲ್ ಅವರು ಈ ಸಂಬಂಧ ಟ್ವಿಟ್ ಮಾಡಿದ್ದು, ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದುಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ. ಆದರೆ ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜವಧೆ ಆಗಬಾರದು ಎಂಬ ದೃಷ್ಟಿಯಲ್ಲಿ , ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಸಚಿವ ಎಸ್ ಟಿ ಸೋಮಶೇಖರ್ ಮಾತನಾಡಿ, ನಮ್ಮ ರಾಜಕೀಯ ಜೀವನದ ನಾಶಕ್ಕೆ ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ಎಚ್ಚರಿಕೆ ವಹಿಸಿದ್ದೇವೆ. ಇಷ್ಟು ವರ್ಷದ ರಾಜಕೀಯ ಜೀವನ ಹಾಳಾಗಬಾರದು ಎನ್ನುವ ಕಾರಣಕ್ಕೆ ನಮ್ಮ ವಿರುದ್ಧದ ಯಾವುದೇ ಸುದ್ದಿ ಪ್ರಸಾರವಾಗದಂತೆ ತಡೆಯಲು ಕಾನೂನು ಮೊರೆ ಹೋಗಿದ್ದೇವೆ. ಈ ರಾಜಕೀಯ ಷಡ್ಯಂತ್ರ ಯಾರು ಮಾಡ್ತಾ ಇದ್ದಾರೆ ಎನ್ನುವುದು ಎರಡು ಮೂರು ದಿನಗಳಲ್ಲಿ ಗೊತ್ತಾಗಲಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top