Connect with us

Dvgsuddi Kannada | online news portal | Kannada news online

ಉಪ ಚುನಾವಣೆ: ದಾವಣಗೆರೆ ಜಿಎಂಐಟಿಯಲ್ಲಿ ತಡ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ‌ ಮಹತ್ವದ ಸಭೆ

ಪ್ರಮುಖ ಸುದ್ದಿ

ಉಪ ಚುನಾವಣೆ: ದಾವಣಗೆರೆ ಜಿಎಂಐಟಿಯಲ್ಲಿ ತಡ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ‌ ಮಹತ್ವದ ಸಭೆ

ದಾವಣಗೆರೆ: ಸಿಂದಗಿ ಮತ್ತು ಹಾನಗಲ್‌ ಉಪ ಚುನಾವಣೆ ಹಿನ್ನೆಲೆ ನಿನ್ನೆ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆ ಜಿಎಂಐಟಿಯಲ್ಲಿ ಪ್ರಮುಖ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದರು.

ಈ ಸಭೆಯಲ್ಲಿ ಸಚಿವರಾದ ಬಿ.ಸಿ.ಪಾಟೀಲ, ಸುನೀಲ್‌ ಕುಮಾರ್‌ ‌ಸಂಸದ ಜಿ.ಎಂ ಸಿದ್ದೇಶ್ವವರ್ ಸೇರಿದಂತೆ ಪ್ರಮುಖರು ನಾಯಕರು ಭಾಗಿಯಾಗಿದ್ದರು. ಇಂದು ಬೆಳಗ್ಗೆ ಹಾವೇರಿ ಜಿಲ್ಲೆಯ ನಾಯಕರೊಂದಿಗೆ ಸಭೆ ನಡೆಯಲಿದೆ ಎನ್ನಲಾಗುತ್ತಿದೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಎಚಿವ ಬಿ.ಸಿ. ಪಾಟೀಲ, ಚುನಾವಣೆ ನಿರ್ವಹಣೆಗೆ ಪ್ರತ್ಯೇಕ ಸಮಿತಿಯನ್ನು ರಚಿಸಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಯಾರೂ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಸಿಲ್ಲ. ಯಡಿಯೂರಪ್ಪ ಅವರೇ ಸ್ಥಾನ ಬಿಟ್ಟು ಕೊಟ್ಟಿದ್ದಾರೆ. ಲಿಂಗಾಯತರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ಇಬ್ಬರೂ ಹಾನಗಲ್, ಸಿಂದಗಿಯಲ್ಲಿ ಪ್ರಚಾರ ಮಾಡುತ್ತಾರೆ ಎಂದರು.

ಉಪ ಚುನಾವಣೆಯ ಎರಡು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಕಾಂಗ್ರೆಸ್ ಸರ್ಕಾರದಲ್ಲಿಯೂ ಪೆಟ್ರೋಲ್‌ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಐಟಿ ದಾಳಿ ಉಪ ಚುನಾವಣೆಯ ಮೇಲೆ ಪ್ರಭಾವ ಬೀರುವುದಿಲ್ಲ ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top