Connect with us

Dvgsuddi Kannada | online news portal | Kannada news online

 ರಾಜ್ಯದ ಎಲ್ಲ ಗ್ರಾಮಗಳಿಗೆ ಸ್ಮಶಾನ: ಕಂದಾಯ ಸಚಿವ ಆರ್.ಅಶೋಕ್

ಪ್ರಮುಖ ಸುದ್ದಿ

 ರಾಜ್ಯದ ಎಲ್ಲ ಗ್ರಾಮಗಳಿಗೆ ಸ್ಮಶಾನ: ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಗ್ರಾಮಗಳಿಗೂ ಆದ್ಯತೆ ಮೇರೆಗೆ ಸ್ಮಶಾನ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಅಶೋಕ್ ಹೇಳಿದರು.

ವಿಧಾನಪರಿಷತ್‍  ಸದಸ್ಯ ಡಾ. ತಳವಾರ್ ಸಾಬಣ್ಣ ಅವರ ಪ್ರಶ್ನೆ ಕೇಳಿ,  ಕಲಬುರಗಿ ಶಹಬಾದ್ ತಾಲ್ಲೂಕಿನ ಭಂಕೂರು ಗ್ರಾಮದಲ್ಲಿ ಸ್ಮಶಾನದ ಕೊರತೆ ಇರುವುದನ್ನು ವಿವರಿಸಿದರು. ಇದಕ್ಕೆ ಉತ್ತರ ನೀಡಿದ ಸಚಿವರು, ಈ ಗ್ರಾಮದಲ್ಲಿ 23 ಎಕರೆ ಸರ್ಕಾರಿ ಜಾಗ ಇದೆ. ಆದರೆ ಅದನ್ನು ಸ್ಮಶಾನಕ್ಕೆ ನೀಡಲು ಸ್ಥಳೀಯರು ಅವಕಾಶ ನೀಡುತ್ತಿಲ್ಲ. ಹೀಗಾಗಿ ಬೇರೆಡೆ 4.3 ಎಕರೆ ಜಮೀನು ಖರೀದಿಗೆ ಕ್ರಮ ಕೈಗೊಂಡಿದ್ದೇವೆ ಎಂದರು .

ರಾಜ್ಯದಲ್ಲಿ 29,590 ಗ್ರಾಮಗಳಿವೆ. ಅವುಗಳಲ್ಲಿ 21,330 ಗ್ರಾಮಗಳಿಗೆ ಸ್ಮಶಾನಕ್ಕೆ ಜಮೀನಿದೆ. ಇನ್ನು 7,069 ಗ್ರಾಮಗಳಿಗೆ ಸ್ಮಶಾನ ಇಲ್ಲ. ಅಷ್ಟೂ ಗ್ರಾಮಗಳಿಗೆ ಅಗತ್ಯವಿದ್ದರೆ ಭೂಮಿ ಖರೀದಿ ಮಾಡಿ ಸ್ಮಶಾನಕ್ಕೆ ಜಾಗ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top