ಕೇಂದ್ರ ಸಚಿವ ಸದಾನಂದ ಗೌಡರಿಗೆ ತಿರುಗೇಟು ನೀಡಿದ ಯತ್ನಾಳ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಓರ್ವ ಸಾಮಾನ್ಯ ಶಾಸಕ. ಪಕ್ಷದ ವಿಚಾರವಾಗಿ ಮಾತನಾಡಲುಅವರೇನು  ಪಕ್ಷದ ಅಧ್ಯಕ್ಷರಲ್ಲ ಎಂಬ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಯತ್ನಾಳ್,  ಸದಾನಂದ ಗೌಡರ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.

ಡಿ.ವಿ.ಎಸ್ ಹೇಳಿದಂತೆ ನಾನೊಬ್ಬ ಸಾಮಾನ್ಯ ಶಾಸಕ. ಇದು ನೂರಕ್ಕೆ ನೂರರಷ್ಟು ನಿಜ. ನಾನು ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲೇ ಕೇಂದ್ರ ಸಚಿವನಾಗಿದ್ದೆ. ಸದಾನಂದಗೌಡರು ಈಗ ಕೇಂದ್ರ ಸಚಿವರಾಗಿದ್ದಾರೆ. ಹೀಗಾಗಿ ಯಾರು ಸೀನಿಯರ್ ಎಂಬುದನ್ನು ನೀವೇ ತಿಳಿದುಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

ಸಂಕ್ರಮಣದ ವೇಳೆಗೆ ಸಂಪುಟ ವಿಸ್ತರಣೆ ಆಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ಏನಾದ್ರೂ ಬದಲಾವಣೆ ಆಗುತ್ತೆ ಎಂದಿದ್ದ ಯತ್ನಾಳ್ ಹೇಳಿಕೆಗೆ ಕಿಡಿಕಾರಿದ್ದಸದಾನಂದ ಗೌಡ,  ಬೀದಿಯಲ್ಲಿ ನಿಂತು ಮಾತನಾಡುವುದು ಯತ್ನಾಳ್ ಗೆ ಶೋಭೆಯಲ್ಲ. ಅವರೊಬ್ಬ ಸಾಮಾನ್ಯ  ಶಾಸಕ ಎಂದು ಹೇಳಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *