ಮೈಸೂರು: ನನಗೆ ಆರ್ ಎಸ್ ಎಸ್ ಮೂಲಗಳಿಂದ ಖಚಿತ ಮಾಹಿತಿ ಬಂದಿದ್ದು, ಸಿಎಂ ಯಡಿಯೂರಪ್ಪನವರನ್ನು ಏಪ್ರಿಲ್ ಬಳಿಕ ಅಧಿಕಾರದಿಂದ ಕೆಳಗಿಳಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಅಮಿತ್ ಶಾ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಅವರನ್ನು ಏಪ್ರಿಲ್ ನಂತರ ಇಳಿಸುತ್ತಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮೈಸೂರಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅಮಿತ್ತ ಶಾ ಯಡಿಯೂರಪ್ಪರನ್ನು ನೇರವಾಗಿ ತೆಗೆಯುತ್ತೇನೆ ಎಂದು ಹೇಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಇನ್ನು ಸಿಡಿ ಬ್ಲಾಕ್ ಮೇಲ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಈ ವಯಸ್ಸಲ್ಲಿ ಏನೇನು ಮಾಡಿದ್ದಾರೋ ಯಾರಿಗೆ ಗೊತ್ತು? ಎಂದು ಪ್ರಶ್ನಿಸಿದರು.



