ಕೊರೊನಾ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ; ನಿಗಮ ಸ್ಥಾಪನೆಗೆ ಹಣ ಎಲ್ಲಿಂದ ಬಂತು ಸಿದ್ದರಾಮಯ್ಯ ಪ್ರಶ್ನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಪ್ರವಾಹ ಸಂತ್ರಸ್ತರಿಗೆ ಪರಿಹಾರ, ಕೊರೊನಾದಿಂದ ಬೀದಿಗೆ ಬಿದ್ದವರ ರಕ್ಷಣೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ,  ನಿಗಮ, ಪ್ರಾಧಿಕಾರ ಸ್ಥಾಪನೆಗೆ ನೂರಾರು ಕೋಟಿ ಹಣ ಎಲ್ಲಿಂದ ಬಂತು ಎಂದು  ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ನಿಗಮ ಸ್ಥಾಪನೆ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದಿರುವ  ಸಿದ್ದರಾಮಯ್ಯ ಅವರು,  ಬಡತನ ಎಂಬುದು ಜಾತಿ, ಧರ್ಮ ಸಮುದಾಯಗಳನ್ನು ಮೀರಿದ್ದು, ತಳ ಸಮುದಾಯಗಳಲ್ಲಿ ಮಾತ್ರ ಬಡವರಿಲ್ಲ, ಮೇಲ್ಜಾತಿಗಳಲ್ಲೂ ಬಡವರಿದ್ದಾರೆ. ಬಡವರ ಕಲ್ಯಾಣ ಕಾರ್ಯಕ್ರಮ ರೂಪಿಸಿದರೆ ಸ್ವಾಗತ ಅದನ್ನು ಬಿಟ್ಟು ರಾಜಕೀಯ ಬುದ್ಧಿಯ ಕಸರತ್ತನ್ನು ಖಂಡಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

ನಾವು ಮರಾಠ ಅಥವಾ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧಿಸುತ್ತಿಲ್ಲ. ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆ ಆಗಾಗ ಸಂಘರ್ಷ ಇದ್ದೇ ಇದೆ. ಆದರೂ ಅವರು ಸೌಹಾರ್ದತೆಯಿಂದ ಬದುಕುತ್ತಿದ್ದರು. ಇದೀಗ ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿರುವುದರಿಂದ ಕನ್ನಡಿಗರ ಸ್ವಾಭಿಮಾನ ಕೆರಳಿಸುವ ಮೂಲಕ ರಾಜ್ಯದ ಶಾಂತಿ ಸುವ್ಯವಸ್ಥೆ ಕದಡುವ ಯತ್ನ ಮಾಡಲಾಗುತ್ತಿದೆ. ಇದಕ್ಕೆ ಸಿಎಂ ಯಡಿಯೂರಪ್ಪನವರೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದರೆ  ಜಾತಿವಾದಿಗಳು ಎಂದು ಬಿಜೆಪಿ ನಾಯಕರು ಟೀಕಿಸುತ್ತಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಮಾಡುತ್ತಿರುವುದೇನು? ಜಾತಿಗಳ ನಡುವೆ, ಭಾಷೆಗಳ ನಡುವೆಯೂ ವಿಷಬೀಜ ಬಿತ್ತಿ ಕಿತ್ತಾಡಿಕೊಳ್ಳುವಂತೆ ಮಾಡಿದೆ.

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು, ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು, ಕೊರೊನಾದಿಂದ ಬೀದಿಗೆ ಬಿದ್ದವರ ರಕ್ಷಣೆಗೆ ಸರ್ಕಾರದ ಬಳಿ ಹಣವಿಲ್ಲ. ನಿಗಮ, ಪ್ರಾಧಿಕಾರ ಸ್ಥಾಪನೆಗೆ ನೂರಾರು ಕೋಟಿ ಹಣ ಎಲ್ಲಿಂದ ಬಂತು ಎಂದು ಪ್ರಶ್ನೆ ಹಾಕಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *