ಸಿಎಂ ಯಡಿಯೂರಪ್ಪ ಡಕೋಟಾ ಬಸ್ ನಲ್ಲಿ ಕುಳಿತು ಲೂಟಿ ಹೊಡೆಯುತ್ತಿದ್ದಾರೆ: ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್,  ಯಡಿಯೂರಪ್ಪ ಡಕೋಟಾ ಬಸ್ ನಲ್ಲಿ ಕುಳಿತಿದ್ದು, ಅಲ್ಲಿಯೂ ಲೂಟಿ ಹೊಡೆಯುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

ಪಕ್ಷೇತರ ಶಾಸಕ ಶರತ್ ಬಚ್ಚೇಗೌಡಗೆ ಕಾಂಗ್ರೆಸ್ ಸಹ ಸದಸ್ಯತ್ವ ನೀಡಿ ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಡಕೋಟಾ ಬಸ್ ನಲ್ಲಿ ಕೂತಿದ್ದಾರೆ. ಅಲ್ಲಿಂದಲ್ಲೇ ಸ್ವಾಹಾ ಮಾಡುತ್ತಿದ್ದಾರೆ. ರಾಜ್ಯದಲ್ಲಿರುವುದು ಅಭಿವೃದ್ಧಿಪರ ಸರ್ಕಾರವಲ್ಲ. ಲೂಟಿ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ನಾನು ಕಳೆದ ಬಾರಿ ಚುನಾವಣೆಯಲ್ಲಿ ಶರತ್ ವಿರುದ್ಧ ಪ್ರಚಾರ ಮಾಡಿದ್ದೆ. ಈಗ ಅವರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದು, ಅವರ ಬೆಂಬಲವನ್ನು ನಾವು ಒಪ್ಪಿದ್ದೇವೆ. ಎಂಟಿಬಿ ನಾಗರಾಜ್ ಸೋತು ಹಿಂಬಾಗಿಲ ಮೂಲಕ ಮಂತ್ರಿಯಾಗಿದ್ದಾರೆ.

ಸಚಿವರಾ ಮಾತ್ರಕ್ಕೆ ಅವರು ಹೊಸಕೋಟೆ ಜನರ ಪ್ರತಿನಿಧಿಯಲ್ಲ. ಶರತ್ ಬಚ್ಚೇಗೌಡ ಆ ಕ್ಷೇತ್ರದ ಪ್ರತಿನಿಧಿ. ಅವರು ಕ್ಷೇತ್ರದಲ್ಲಿ ಏಕಾಂಗಿಯಾಗಿ ಹೋರಾಡಲು ಸಾಧ್ಯವಿಲ್ಲ. ಹಾಗಾಗಿ ಕಾಂಗ್ರೆಸ್ ಅವರಿಗೆ ಬೆಂಬಲಿಸಲಿದೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *