Connect with us

Dvgsuddi Kannada | online news portal | Kannada news online

ಮುಂದಿನ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸಿಲ್ಲ: ಸಿದ್ದರಾಮಯ್ಯ

ರಾಜಕೀಯ

ಮುಂದಿನ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸಿಲ್ಲ: ಸಿದ್ದರಾಮಯ್ಯ

ಮೈಸೂರು: ನಾನು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆ, ಕೊಪ್ಪಳ, ಕೋಲಾರ ಭಾಗದಲ್ಲಿ ಚುನಾವಣೆಗೆ ಸ್ಪರ್ಧೆ ನಡೆಸುವಂತೆ ಯಾರೂ ಒತ್ತಾಯ ಮಾಡಿಲ್ಲ ಎಂದರು.

ಚಾಮುಂಡೇಶ್ವರಿಯಲ್ಲಿ ಪರ್ಯಾಯ ನಾಯಕನ ಕೂಗು ವಿಚಾರದ ಬಗ್ಗೆ ಮಾತನಾಡಿದ ಅವರು, ಅದು ಒಳ್ಳೆಯ ಬೆಳವಣಿಗೆ, ನಾನೇನು ಶಾಶ್ವತ ಅಲ್ಲವಲ್ಲ. ಪರ್ಯಾಯ ನಾಯಕ ಬೆಳೆಯಲಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುತ್ತಿಲ್ಲ.  ನಾನು ಸೋತ ಬಳಿಕ ಇಲ್ಲಿ ಸಭೆ ನಡೆಸಿಲ್ಲ ಎಂದರು.

ಸಭಾಪತಿಗೆ ನೋಟೀಸ್ ಜಾರಿ ಮಾಡುವ ಎಲ್ಲಾ ಅಧಿಕಾರ ಇದೆ. ಸಭಾಪತಿ ಅಧೀನದಲ್ಲಿ ಕಾರ್ಯದರ್ಶಿ ಬರುತ್ತಾರೆ. ಕಾರ್ಯದರ್ಶಿಯವರು ಬಿಜೆಪಿಯವರು ಹೇಳಿದ ಹಾಗೆ ಕೇಳಿಕೊಂಡು ಇದ್ದರೆ ಸುಮ್ನೆ ಕೂರಬೇಕಾ ಎಂದು ಪ್ರಶ್ನಿಸಿದರು. ಜನವರಿ ಒಂದರಿಂದ ಶಾಲಾ ಕಾಲೇಜು ಆರಂಭ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಸೋಂಕು ಇದೇ ರೀತಿ ನಿಯಂತ್ರಣದಲ್ಲಿದ್ದರೆ ಆರಂಭ ಮಾಡಲಿ, ಏನೂ ಸಮಸ್ಯೆ ಇಲ್ಲ. ಆದರೆ ಮಾಸ್ಕ್‌, ಸ್ಯಾನಿಟೈಸರ್ ಹಾಕಿಕೊಳ್ಳುವಂತೆ ನೋಡ್ಕೋಬೇಕು. ಕೋವಿಡ್ ಸೋಂಕಿನ ಎರಡನೇ ಅಲೆ ಬೀಸಿದರೆ ಶಾಲೆ ಆರಂಭ ಮಾಡುವುದು ಬೇಡ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top