ಬೆಂಗಳೂರು : ಕೊರೊನಾದಿಂದ ನಿಧನ ಹೊಂದಿದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ಡಿ.01 ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಇಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
1 ರಾಜ್ಯಸಭಾ ಸ್ಥಾನಕ್ಕೆ ಚುನಾವಣಾ ಆಯೋಗವು ಡಿಸೆಂಬರ್ 1ಕ್ಕೆ ಉಪ ಚುನಾವಣೆ ಘೋಷಣೆ ಮಾಡಿತ್ತು. ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿತ್ತು. ನಾರಾಯಣ್ ನಾಮಪತ್ರ ಸಲ್ಲಿಕೆ ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.



