Connect with us

Dvgsuddi Kannada | online news portal | Kannada news online

ಕೋವಿಡ್-19 ಬಗ್ಗೆ ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ; 25 ಸಾವಿರ ಬಹುಮಾನ

ಪ್ರಮುಖ ಸುದ್ದಿ

ಕೋವಿಡ್-19 ಬಗ್ಗೆ ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ; 25 ಸಾವಿರ ಬಹುಮಾನ

ದಾವಣಗೆರೆ: ಕೋವಿಡ್ 19 ಕಳೆದ ವರ್ಷದಿಂದ ವಿಶ್ವದಲ್ಲಿಯೇ ಆತಂಕ ಮೂಡಿಸಿರುವ ಹೆಸರು. ಕೋವಿಡ್ ವಿಚಾರವನ್ನು ಇಟ್ಟುಕೊಂಡು ಈಗ ಅಂತರಾಷ್ಟ್ರೀಯ ಪತ್ರ ಲೇಖನ ಸ್ಪರ್ಧೆಯನ್ನು ಭಾರತೀಯ ಅಂಚೆ ಇಲಾಖೆ ಆಯೋಜಿಸಿದೆ. ವಿಜೇತರಾದವರಿಗೆ ನಗದು ಬಹುಮಾನವನ್ನು ನೀಡಲಾಗುತ್ತದೆ.

ಭಾರತೀಯ ಅಂಚೆ ಇಲಾಖೆ ಚಿತ್ರದುರ್ಗ ವಿಭಾಗದ ವತಿಯಿಂದ 15 ವರ್ಷದ ಒಳಗಿನ ಯುವಜನತೆಗೆ ಈ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ಕೋವಿಡ್ 19 ಕುರಿತ ತಮ್ಮ ಅನುಭವವನ್ನು ತಮ್ಮ ಕುಟುಂಬದ ಸದಸ್ಯರಿಗೆ ಪತ್ರ ಬರೆಯುವ ಮೂಲಕ ವಿವರಿಸಬೇಕು.

ಈ ಅಂತರಾಷ್ಟ್ರೀಯ ಪತ್ರ ಲೇಖನ ಸ್ಪರ್ಧೆಯನ್ನು ಮಾರ್ಚ್ 28ರಂದು ಆಯೋಜನೆ ಮಾಡಲಾಗಿದೆ
ಸ್ಪರ್ಧೆಯು ಒಂದು ಗಂಟೆಯ ಅವಧಿಯದಾಗಿದ್ದು, 100 ಅಂಕಗಳನ್ನು ಒಳಗೊಂಡಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 800 ಪದಗಳನ್ನು ಮೀರದಂತೆ ಪತ್ರ ಬರೆಯಬೇಕು. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಮೂರು ಭಾವಚಿತ್ರದೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ನಗದು ಬಹುಮಾನ; ಪತ್ರ ಲೇಖನ ಸ್ಪರ್ಧೆಯಲ್ಲಿ ಕರ್ನಾಟಕ ವೃತ್ತ ಮಟ್ಟದಲ್ಲಿ ಪ್ರಥಮ ಬಹುಮಾನ ರೂ. 25000, ದ್ವಿತೀಯ 10,000 ಹಾಗೂ ತೃತೀಯ 4,500 ರೂ.ಗಳಾಗಿವೆ. ಪ್ರಮಾಣ ಪತ್ರವನ್ನು ಸಹ ನೀಡಲಾಗುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top