Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮಳೆಯ ಅರ್ಭಟ; ಸಿಡಿಲಿಗೆ ಎರಡು ಹಸು, ಒಂದು ಎಮ್ಮೆ ಸಹಿತ ಮೂವರ ಸಾವು.!!!

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮಳೆಯ ಅರ್ಭಟ; ಸಿಡಿಲಿಗೆ ಎರಡು ಹಸು, ಒಂದು ಎಮ್ಮೆ ಸಹಿತ ಮೂವರ ಸಾವು.!!!

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯಲ್ಲಿ‌ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲಿಗೆ ಮೂವರು ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಹೊರವಲಯದಲ್ಲಿ ಬೀರಪ್ಪ ನಿಂಗಪ್ಪ ಅವರಾದಿ (15), ಮಸಳಿ ಬಿ.ಕೆ.ಗ್ರಾಮದ ಸೋಮಶೇಖರ ಪಟ್ಟಣಶೆಟ್ಟಿ (45) ಮತ್ತು ಚಡಚಣ ತಾಲ್ಲೂಕಿನ ಹಾವನಾಳ ಗ್ರಾಮ ಸುನಂದಾ ಶ್ರೀಮಂತ ಡೋಳ್ಳಿ (50) ಎಂಬುವರು ಮೃತಪಟ್ಟಿದ್ದಾರೆ. ಒಂದು ಎಮ್ಮೆ ಮತ್ತು ಎರಡು ಹಸು ಸಿಡಲಿಗೆ ಹೊಡೆತಕ್ಕೆ ಮೃತಪಟ್ಟಿವೆ.

ಬಾಗಲಕೋಟೆ, ವಿಜಯಪುರ ಮತ್ತು ಬೆಳಗಾವಿ, ಬೀದರ್, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ. ವಿಜಯಪುರ ಜಿಲ್ಲೆ ತಿಕೋಟಾ,ಆಲಮಟ್ಟಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದೆ.‌ ತಾಳಿಕೋಟೆ ಪಟ್ಟಣದಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top