Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ವರ್ಷದ ಮೊದಲ ಮಳೆ: ಧರೆಗೆ ತಂಪೆರೆದ ವರುಣ; ಮಾ.20ರ ನಂತರ ಕೆಲ ಜಿಲ್ಲೆಯಲ್ಲಿ ಮಳೆ

IMG 20240314 100322

ಪ್ರಮುಖ ಸುದ್ದಿ

ರಾಜ್ಯದಲ್ಲಿ ವರ್ಷದ ಮೊದಲ ಮಳೆ: ಧರೆಗೆ ತಂಪೆರೆದ ವರುಣ; ಮಾ.20ರ ನಂತರ ಕೆಲ ಜಿಲ್ಲೆಯಲ್ಲಿ ಮಳೆ

ಬೆಂಗಳೂರು: ಬುಧವಾರ (ಮಾ.13) ರಾಜ್ಯದ ಹಲವೆಡೆ ಮಳೆಯಾಗಿದೆ. ಮೂಲಕ ಬಿರು ಬಿಸಿಲಿನ ತಾಪಮಾನಕ್ಕೆ ಬಳಲಿದ್ದ ಧರೆಗೆ ವರುಣ ತಂಪರೆದಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯ ಪ್ರದೇಶದ ಮುತ್ತೋಡಿ ವಲಯದಲ್ಲಿ ಬುಧವಾರ ಸಂಜೆ ವರ್ಷದ ಮೊದಲ ಮಳೆಯಾಗಿದ್ದು, ಜನ ಸಂತಸಗೊಂಡಿದ್ದಾರೆ.

ಇನ್ನೂ ಮಾರ್ಚ್ 20 ರ ಬಳಿಕ ರಾಜ್ಯದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ದಕ್ಷಿಣ ಕನ್ನಡದ ಘಟ್ಟಗಳ ಭಾಗದಲ್ಲಿ ಲಘು ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.

ಈ ಬಾರಿ ಮಳೆ ಇಲ್ಲದೇ ಬರಗಾಲದಿಂದಾಗಿ ಕುಡಿಯುವ ನೀರು, ಬೆಳೆಗಳಿಗೆ ನೀರುಣಿಸಲು ಜನ, ರೈತರು ಸಂಕಷ್ಟದಲ್ಲಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಸಂಭ್ರಮಿಸಿದ್ದಾರೆ. ಮೊದಲ ಮಳೆ ಹನಿಗಳು ಬೀಳುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಬಂದು ಮಳೆಯಲ್ಲಿ ನೆನೆದು ಸಂತಸ ವ್ಯಕ್ತಪಡಿಸಿದ್ದಾರೆ. ಮಳೆ ಹನಿ ಬಿದ್ದಾಗ ಮಣ್ಣಿನ ವಾಸನೆಯಿಂದ ಸಂತಸಪಟ್ಟಿದ್ದಾರೆ.

ಇನ್ನು ಕೊಡಗು ಜಿಲ್ಲೆ ಹಲವೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಮೂರ್ನಾಡು, ಕಾಕೋಟುಪರಂಬು ಸೇರಿದಂತೆ ಜಿಲ್ಲೆಯ ಹಲವು ಕಡೆ ತುಂತುರು ಮಳೆಯಾಗಿದೆ. ಮಡಿಕೇರಿ ಸೇರಿ ಹಲವಡೆ ದಟ್ಟ ಮೋಡ ಕವಿದ ವಾತಾವರಣ ಕಂಡು ಬಂದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top