Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಏ.15ರವರೆಗೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಯುಗಾದಿ ಹಬ್ಬದಂದು ತಂಪೆರೆದ ವರುಣ

rain 233

ಪ್ರಮುಖ ಸುದ್ದಿ

ರಾಜ್ಯದಲ್ಲಿ ಏ.15ರವರೆಗೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಯುಗಾದಿ ಹಬ್ಬದಂದು ತಂಪೆರೆದ ವರುಣ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 15ರವರೆಗೆ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯುಗಾದಿ ಹಬ್ಬದಂದು ನಿನ್ನೆ (ಏ.09) ರಾಜ್ಯದ ವಿವಿಧ ಕಡೆ ಮಳೆಯಾಗಿದ್ದು, ವರುಣ ಧರೆಗೆ ತಂಪೆರೆದಿದ್ದಾನೆ. ಕೊಡಗು, ಚಿಕ್ಕಮಗಳೂರು, ಮೈಸೂರು, ಸೇರಿದಂತೆ ಹಲವು ಕಡೆಗಳಲ್ಲಿ ಈಗಾಗಲೆ ಮಳೆಯಾಗುತ್ತಿತ್ತು. ಹಬ್ಬದ ದಿನ ದಾವಣಗೆರೆ, ಹಾವೇರಿ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ಉಚ್ಚೆಂಗಮ್ಮ ಜಾತ್ರೆ ವೇಳೆ ಸ್ವಲ್ಪ ಮಳೆಯಾಗಿದ್ದು, ಬಿಸಿಲಿನಿಂದ ಬೇಸತ್ತಿದ್ದ ಜನ ಮಳೆ ಬಂದ ತಕ್ಷಣ ಖುಷಿಯಿಂದ ಕುಣಿದು ಕುಪ್ಪಳಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣ ಸುತ್ತಮುತ್ತ ಕೂಡ ಮಳೆಯಾಗಿದೆ.

ಇಂದು (ಏ.10) ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೆರಡು ಕಡೆಗಳಲ್ಲಿ ಚದುರಿದಂತೆ ಲಘು ಮಳೆಯಾಗುವ ಸಾಧ್ಯತೆ ಇದ್ದು ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.ಏಪ್ರಿಲ್ 11 ರಂದು ಬೀದರ್, ಕಲಬುರ್ಗಿ, ವಿಜಯಪುರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ಏಪ್ರಿಲ್ 12ರಂದು ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್ 13ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 14 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಇನ್ನೂ ಏ.15ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ವಿಜಯಪುರ, ಕಲಬುರ್ಗಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಿಸಿಲಿನಿಂದ ಹೈರಾಣಾಗಿರುವ ಜನಕ್ಕೆ ಮಳೆ ಸುದ್ದಿ ತುಸು ನೆಮ್ಮದಿ ತಂದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top