Connect with us

Dvgsuddi Kannada | online news portal | Kannada news online

ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆ; ರಾಜ್ಯದಲ್ಲಿ ಇಳಿಕೆಯಾದ ತಾಪಮಾನ

rain dvgsuddi kannada

ಪ್ರಮುಖ ಸುದ್ದಿ

ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ಮಳೆ; ರಾಜ್ಯದಲ್ಲಿ ಇಳಿಕೆಯಾದ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ಬಿರು ಗಾಳಿ ಸಹಿತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ಕರಾವಳಿ,‌ ಮಲೆನಾಡು, ದಕ್ಷಿಣ,‌ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 19ರಿಂದ ಮಳೆ ಇನ್ನಷ್ಟು ಬಿರುಸಾಗುವ ಸಾಧ್ಯತೆ ಇದೆ.

ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಮೇ 19ರಿಂದ ಎರಡು ದಿನ ಹಾಗೂ ಮಂಡ್ಯ, ತುಮಕೂರು, ಉಡುಪಿಯಲ್ಲಿ ಮೇ 20ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಬಳ್ಳಾರಿ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗದಲ್ಲಿ ಮುಂದಿನ ಎರಡು ದಿನ, ಉಡುಪಿ, ಉತ್ತರ ಕನ್ನಡದಲ್ಲಿ ಮೇ 19ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಕರ್ನಾಟಕ ಭಾಗದ ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಗದಗ, ರಾಯಚೂರು, ಕೋಲಾರ, ರಾಮನಗರ, ವಿಜಯನಗರ, ಬಾಗಲಕೋಟೆಯಲ್ಲಿ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ.ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು ಗರಿಷ್ಠ ತಾಪಮಾನದಲ್ಲಿ 2-4 ಡಿ. ಸೆ. ಇಳಿಮುಖವಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top