Connect with us

Dvgsuddi Kannada | online news portal | Kannada news online

ಮತ್ತೆ ಚುರುಕು ಪಡೆದ ಮುಂಗಾರು: ಮೂರು ದಿನ ಭಾರೀ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ಮತ್ತೆ ಚುರುಕು ಪಡೆದ ಮುಂಗಾರು: ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಎರಡು ದಿನ ಬಿಡುವಿನ ಬಳಿಕ ಈಗ ಮತ್ತೆ ಚುರು ಪಡೆಯಲಿದೆ. ಶುಕ್ರವಾರದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಆವರಿಸಿಕೊಳ್ಳಲಿದೆ. ಕರಾವಳಿ, ಮಲೆನಾಡು, ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಕಳೆದೆರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ತುಸು ಕಡಿಮೆಯಾಗಿದ್ದ ಮಳೆ ಅಬ್ಬರ ಮತ್ತೆ ಅಬ್ಬರಿಸಲಿದೆ. ಕರಾವಳಿಯ ಉತ್ತರಕನ್ನಡ, ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮೂರು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಇದೇ ಅವಧಿಯಲ್ಲಿ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವುದುಂಟು. ದಕ್ಷಿಣ ಒಳನಾಡಿನ ಮಲೆನಾಡಿನ ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆದರೀಗ ಸದ್ಯದ ಹವಾಮಾನ ಮುನ್ಸೂಚನೆಯಂತೆ ಶುಕ್ರವಾರದಿಂದ ಜೋರು ಮಳೆ ಸುರಿಸಲಿದೆ. ಹಳೇ ಮೈಸೂರು ಭಾಗದ ಪ್ರದೇಶಗಳು ಸೇರಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 30ರಿಂದ 40 ಕಿಲೋಮೀಟರ್‌ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೀದರ್‌, ಕಲಬುರಗಿ, ಯಾದಗಿರಿಯ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ. ಜಲಾಶಯಗಳಿಗೆ ಹೆಚ್ಚಿನ ನೀರು ಹರಿದುಬರುವ ನಿರೀಕ್ಷೆಯನ್ನು ಹುಟ್ಟಿಸಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗುರುವಾರ ಸಾಧಾರಣ ಪ್ರಮಾಣದ ಮಳೆಯಾಗಲಿದ್ದು, ಶುಕ್ರವಾರದಿಂದ ನಾಲ್ಕು ಭಾರೀ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top