Advertisement

ಜು.31ರವರೆಗೆ ಅಬ್ಬರಿಸಲಿರುವ ವರುಣ; ಮಳೆ ಇಳಿಕೆ ಬಗ್ಗೆ ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು…?

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಪ್ರದೇಶಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಎರಡ್ಮೂರು ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಸತತ‌ ಮಳೆಯಿಂದ ಶೀತ ಗಾಳಿ ಬೀಸುತ್ತಿದೆ. ಇದರಿಂದ ಜನ‌‌ ತತ್ತರಿಸಿ ಹೋಗಿದ್ದಾರೆ. ಎಲ್ಲಡೆ ನದಿ-ಹಳ್ಳ ಉಕ್ಕಿ ಹರಿಯುತ್ತಿವೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿಯ ಬೀಸುತ್ತಿದ್ದು, ಜು. 31ರವರೆಗೂ ಕರಾವಳಿ, ಮಲೆನಾಡು ಒಳನಾಡು ಭಾಗದಲ್ಲಿ ಮುಂಗಾರ ಮಳೆ ಅಬ್ಬರಿಸಲಿದೆ.

ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗೆ ‘ಆರೆಂಜ್‌ ಅಲರ್ಟ್‌ ‘ ಹಾಗೂ ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ ದಕ್ಷಿಣ ಕನ್ನಡ, ಕೊಡಗು, ಹಾಸನದಲ್ಲಿ ಜು. 28ರಂದು ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ‌ ಇದೆ.‌ ಜು.31ರವರೆಗೆ ಮಳೆ ಮುಂದುವರಿಯಲಿದೆ.‌

ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಆಗಲಿದೆ. ಗಾಳಿಯು ಗಂಟೆಗೆ 35 ಕಿ.ಮೀ.ದಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ.

ಆ.1ರಿಂದ ರಾಜ್ಯದಲ್ಲಿ ಮಳೆ ಇಳಿಮುಖವಾಗಲಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜು.31ರಿಂದ ಮಳೆ ಕಡಿಮೆಯಾಗಲಿದೆ. ಮಲೆನಾಡು, ಕರಾವಳಿಯಲ್ಲಿ ಮಳೆ ತೀವ್ರತೆ ಜಾಸ್ತಿ ಇರಲಿದೆ ಎಂದು ಹಮಾನ ಇಲಾಖೆ ಮಾಹಿತಿ ನೀಡಿದೆ.

Dvgsuddi: Dvgsuddi.com is a live Kannada news portal. Kannada news online. political, information, crime, film, Sports News in Kannada
Recent Posts