Connect with us

Dvgsuddi Kannada | online news portal | Kannada news online

ಮತ್ತೆ ಚೇತರಿಕೆ ಪಡೆದ ಮುಂಗಾರು ಮಳೆ; ರಾಜ್ಯದಲ್ಲಿ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ಮತ್ತೆ ಚೇತರಿಕೆ ಪಡೆದ ಮುಂಗಾರು ಮಳೆ; ರಾಜ್ಯದಲ್ಲಿ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕಳೆದ 20 ದಿನದಿಂದ ದುರ್ಬಲಗೊಂಡಿದ್ದ ನೈರುತ್ಯ ಮುಂಗಾರು ಮಳೆ, ಮತ್ತೆ ಕಳೆದ ಎರಡು ದಿನಗಳಿಂದ ಚೇತರಿಕೆ ಕಂಡಿದೆ. ರಾಜ್ಯದ ಕೆಲವು ಕಡೆ ಮಳೆ ಅಬ್ಬರಿಸುತ್ತಿದೆ. ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮದಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆ ನಿರೀಕ್ಷಿಸಬಹುದಾಗಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ರಾಜ್ಯದಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಾವಣಗೆರೆಯಲ್ಲಿ ಸತತ ಮೂರು ದಿನದಿಂದ ಭಾರೀ ಮಳೆಯಾಗುತ್ತಿದೆ. ದಾವಣಗೆರೆ, ಹರಿಹರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಾಗುತ್ತಿದೆ. ಇಂದು ಸಹ ದಾವಣಗೆರೆ ನಗರದಲ್ಲಿ ಒಂದು ತಾಸಿಗೂ ಹೆಚ್ಚು ಹೊತ್ತು ಮಳೆಯಾಗಿದೆ. ಇದಲ್ಲಿ ಕೊಂಡಜ್ಜಿ‌, ಕಡ್ಲೇಬಾಳು ಕಕ್ಕರಗೊಳ್ಳ ಸುತ್ತಮುತ್ತ ಭಾರೀ ಮಳೆಯಾಗಿದೆ. ಕಳೆದ 20 ದಿನದಿಂದ ಮಳೆ ಕೊರತೆಯಿಂದ ಒಣಗುತ್ತಿದ್ದ ಬೆಳೆಗೆ ಭಾರೀ ಮಳೆ‌‌ ಜಿಲ್ಲೆಯ ರೈತರರಲ್ಲಿ ಸಂಸತ ಮೂಡಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top