ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡ್ಮೂರು ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರಲಿದೆ. ಇದರ ಪರಿಣಾಮ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 17ರ ವರೆಗೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಕಡೆ ಮಳೆ ಸಾಧ್ಯತೆ ಇದೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಹಲವೆಡೆ ಅಕ್ಟೋಬರ್ 17ರ ವರೆಗೆ ಭಾರೀ ಮಳೆ ಸುರಿಯಲಿದೆ.

ಈ ಹಿನ್ನಲೆ ಈ ಜಿಲ್ಲೆಗಳಿಗೆ ಅಕ್ಟೋಬರ್ 17ರ ವರೆಗೆ ಯಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 17ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಅ.15 ಮತ್ತು 16 ರಂದು ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ದಾವಣಗೆರೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *