Connect with us

Dvgsuddi Kannada | online news portal | Kannada news online

ಎರಡ್ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ..?

rain22

ಪ್ರಮುಖ ಸುದ್ದಿ

ಎರಡ್ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ..?

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ಇದರ ಪರಿಣಾಮ ರಾಜ್ಯದಲ್ಲಿ ತುಂತುರು ಮಳೆಯಾಗುತ್ತಿದೆ. ಎರಡ್ಮೂರು ದಿನ ಕೆಲ ಜಿಲ್ಲೆಯಲ್ಲಿ ತುಂತುರು ಮಳೆಯಾಗಲಿದ್ದು, ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಚಳಿ ವಾತಾವರಣ ಕಡಿಮೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣದಿಂದ ನೆರೆಯ ತಮಿಳುನಾಡು, ಆಂಧ್ರಪ್ರದೇಶ ಸೇರಿ ರಾಜ್ಯದಲ್ಲಿಯೂ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಎಲ್ಲೆಲ್ಲಿ ಮಳೆ..?: ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ, ಕೋಲಾರ, ಮಂಡ್ಯ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top