ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಮುನ್ಸೂಚನೆ; ಜೂನ್ 5ರಿಂದ ಮುಂಗಾರು ಮಳೆ ಪ್ರವೇಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ‌ ಕಳೆದ ಮೂರ್ನಾಲ್ಕು ದಿನದಿಂದ ಮುಂಗಾರು ಪೂರ್ವ ಮಳೆಯಾಗುತಮತ್ತಿದೆ. ಈ ಮಳೆ ಅಬ್ಬರ ಮೇ 26ರ‌ವರೆಗೂ‌ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಜೂನ್ 5ರಿಂದ ಇಡೀ ರಾಜ್ಯಕ್ಕೆ ಪ್ರವೇಶ ಮುಂಗಾರು ಮಳೆ (monsoon rain) ಪಡೆಯಲಿದೆ.

ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕ ಹಾಗೂ ಗೋವಾ ಕರಾವಳಿ ತೀರದಲ್ಲಿ ಒತ್ತಡ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಮೇ 26ರ ವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಸಮೇತ ವ್ಯಾಪಕವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ.

ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್‌, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ ಜಿಲ್ಲೆಗಳಿಗೆ ಮೇ 26ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಗಾಳಿಯ ವೇಗ ಪ್ರತಿ ಗಂಟೆಗೆ 50 ಕಿ.ಮೀ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *