Connect with us

Dvgsuddi Kannada | online news portal | Kannada news online

ಮೇ ತಿಂಗಳಲ್ಲಿ ಮಳೆ ಅಬ್ಬರ; ಮುಂಗಾರು ಪ್ರವೇಶ‌ ಬಳಿಕ ಕುಗ್ಗಿದ ವರುಣ-ಜೂನ್ 10ರ ಬಳಿಕ ಮತ್ತೆ ಜೋರು ಮಳೆ ಮುನ್ಸೂಚನೆ

rain22

ರಾಜ್ಯ ಸುದ್ದಿ

ಮೇ ತಿಂಗಳಲ್ಲಿ ಮಳೆ ಅಬ್ಬರ; ಮುಂಗಾರು ಪ್ರವೇಶ‌ ಬಳಿಕ ಕುಗ್ಗಿದ ವರುಣ-ಜೂನ್ 10ರ ಬಳಿಕ ಮತ್ತೆ ಜೋರು ಮಳೆ ಮುನ್ಸೂಚನೆ

ಬೆಂಗಳೂರು; ಮೇ ತಿಂಗಳ ಅಂತ್ಯದಲ್ಲಿ ಮುಂಗಾರು ಪೂರ್ವ ಭಾರೀ ಮಳೆಯಿಂದ ರಾಜ್ಯದೆಲ್ಲಡೆ ಅವಾಂತರ ಸೃಷ್ಟಿಸಿತ್ತು. ಆದರೀಗ, ರಾಜ್ಯದಲ್ಲಿ ಮುಂಗಾರು ಮಳೆ‌‌ (monsoon rain2025) ಪ್ರವೇಶ ಪಡೆದರೂ ಅಬ್ಬರಿಸುತ್ತಿಲ್ಲ. ರಾಜ್ಯದಲ್ಲಿ ಒಣಹವೆ ಬೀಸುತ್ತಿದ್ದು, ಬಿತ್ತನೆ ಮಾಡಿದ ರೈತರು ಮುಗಿಲು ನೋಡುವಂತಾಗಿದೆ. ಜೂನ್ 10ರ ಬಳಿಕ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಾದ್ಯಂತ ಎರಡ್ಮೂರು ದಿನ ಒಣಹವೆ ಇರಲಿದ್ದು, ಕೆಲವು ಪ್ರದೇಶದಲ್ಲಿ‌ ಮಾತ್ರ ತುಸು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಪೂರ್ವ ‌ಜೋರು ಮಳೆ ಬಂದಿದ್ದರೂ, ಮುಂಗಾರು ಮಳೆ ಆರಂಭಿಕ ನೀರಿಕ್ಷೆ ಕ್ಷೀಣಿಸಿದೆ. ಮುಂಗಾರು ಪೂರ್ವ ಮಳೆ ನಂಬಿ ಬಿತ್ತಿದ ರೈತರಲ್ಲಿ ಆತಂಕ ಮೂಡಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ನಿರೀಕ್ಷಿಸಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top