Connect with us

Dvgsuddi Kannada | online news portal | Kannada news online

ಇಂದಿನಿಂದ ಮತ್ತೆ ಚುರುಕು ಪಡೆದ‌ ಮುಂಗಾರು ಮಳೆ; ಬಿತ್ತನೆ ಮಾಡಿ ಕಾಯುತ್ತಿದ್ದ ರೈತರಿಗೆ ಗುಡ್ ನ್ಯೂಸ್

rain22

ಪ್ರಮುಖ ಸುದ್ದಿ

ಇಂದಿನಿಂದ ಮತ್ತೆ ಚುರುಕು ಪಡೆದ‌ ಮುಂಗಾರು ಮಳೆ; ಬಿತ್ತನೆ ಮಾಡಿ ಕಾಯುತ್ತಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೇ ತಿಂಗಳಲ್ಲಿ ಅಬ್ಬರಿಸಿದ್ದ ಮಳೆ, ನೈಋತ್ಯ ಮಾನ್ಸೂನ್​ (monsoon rain) ಪ್ರವೇಶ ಪಡೆಯುತ್ತಿದ್ದಂತೆ ಸೈಲೆಂಟ್ ಆಗಿತ್ತು. ಇದೀಗ ಇಂದಿನಿಂದ (ಜೂ.9 ) ಮತ್ತೆ ಮುಂಗಾರು ಚೇತರಿಕೆ ಕಾಣಲಿದೆ. ಜೂ.12ರಿಂದ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಮಾನ್ಸೂನ್​ ಮಳೆಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಸಮುದ್ರ ಮೇಲ್ಮೆ ಭಾಗದಲ್ಲಿ ಸುಳಿಗಾಳಿ ಸೃಷ್ಟಿಯಾಗಿದೆ. ಈಗಾಗಲೇ ಬಿತ್ತನೆ ಮಾಡಿದ ರೈತರು ಮುಗಿಲು ನೋಡುತ್ತಿದ್ದು, ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಪಡೆದಿದೆ. ಈ ಮೂಲಕ ಹವಾಮಾನ ಇಲಾಖೆ ರೈತರಿಗೆ ಸಿಹಿ ಸುದ್ದಿ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ, ಗದಗ, ಬಳ್ಳಾರಿ, ವಿಜಯನಗರದಲ್ಲಿ ಜೂ.12ರಿಂದ ಜೂ.14ರವರೆಗೆ ಜೋರಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಕೊಟ್ಟಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಜೂ.13ರಿಂದ ಭಾರೀ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿಯೂ ಜೂ.14ರಂದು ಆರೆಂಜ್​ ಅಲರ್ಟ್ ಇದೆ. ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜೂ.8ರಿಂದ ಜೂ.12ರವರೆಗೆ ಒಣಹವೆ ಇರಲಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಸೇರಿ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಚದುರಿದ ಮಳೆಯಾಗಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top