Connect with us

Dvgsuddi Kannada | online news portal | Kannada news online

ಇಂದಿನಿಂದ ಮತ್ತೆ ಮುಂಗಾರು ಮಳೆ ಚುರುಕು; ಎಲ್ಲೆಲ್ಲಿ ಮಳೆ..?

rain22

ಪ್ರಮುಖ ಸುದ್ದಿ

ಇಂದಿನಿಂದ ಮತ್ತೆ ಮುಂಗಾರು ಮಳೆ ಚುರುಕು; ಎಲ್ಲೆಲ್ಲಿ ಮಳೆ..?

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತಗ್ಗಿದ್ದ ಮುಂಗಾರು ಮಳೆ, ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ (ಜೂ.23) ಮತ್ತೆ ಚುರುಕು ಪಡೆದುಕೊಂಡಿದೆ. ಮಲೆನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜೂ.26ರಿಂದ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ (ಜೂ.22) ಕರಾವಳಿ, ಒಳನಾಡಿನ ಕೆಲ ಜಿಲ್ಲೆಯಲ್ಲಿವಭರ್ಜರಿ ಮಳೆಯಾಗಿದೆ. ಅದರಲ್ಲೂ ಕರಾವಳಿ ಭಾಗದ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾದರೆ, ದಕ್ಷಿಣ ಕರ್ನಾಟಕ ವ್ಯಾಪ್ತಿಯ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂ.23ರಿಂದ ಜೂ.29ರವರೆಗೆ ಮಳೆ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು,ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗದಲ್ಲಿ ಜೂ.26ರಿಂದ ಮುಂದಿನ 3 ದಿನ ಯೆಲ್ಲೋ ಅಲರ್ಟ್​​ ಇರಲಿದೆ. ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಯಾದಗಿರಿಯಲ್ಲಿ ಮುಂದಿನ 4 ದಿನ ಮೋಡ ಕವಿದ ವಾತಾವರಣ ಜತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top