Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ವರುಣನ ಅಬ್ಬರ; ಸಿಡಿಲಿಗೆ ಇಬ್ಬರ ಬಲಿ- ಇನ್ನೂ ನಾಲ್ಕು ದಿನ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ವರುಣನ ಅಬ್ಬರ; ಸಿಡಿಲಿಗೆ ಇಬ್ಬರ ಬಲಿ- ಇನ್ನೂ ನಾಲ್ಕು ದಿನ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬೆಂಗಳೂರು, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು,ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಸಂಜೆ ಮತ್ತು ತಡ ರಾತ್ರಿ ಜೋರಾಗಿ ಮಳೆಯಾಗಿದೆ.

ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಜಮೆರೆಮಸಾಬ ಸಾಹೇಬಲಾಲ ಜಾತಗಾರ, ಬೆಳಗಾವಿ ಜಿಲ್ಲೆಯ ತುಮ್ಮರ ಗುದ್ದಿ ಗ್ರಾಮದ ಭೀಮಪ್ಪ ಅಡಿವೆಪ್ಪ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ನಿನ್ನೆ ಸಂಜೆಯಿಂದ ರಾತ್ರಿಯವರೆಗೂ ಸುರಿದ ಮಳೆಯಿಂದ ಎಲ್ಲೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ತುಂತುರು ಮಳೆಯಾಗಲಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಭಾರೀ ಮಳೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಬಿರುಗಾಳಿಗೆ ಹಲವೆಡೆ ಚಾವಣಿಗೆ ಅಳವಡಿಸಿದ್ದ ತಗಡಿನ ಶೀಟುಗಳು ಹಾರಿಹೋಗಿವೆ. ಸಿಡಿಲು ಬಡಿದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ತಮಿಳುನಾಡು ತೀರ ಪ್ರದೇಶದಲ್ಲಿ ಸೃಷ್ಟಿಯಾಗಿರುವ ಸೈಕ್ಲೋನ್‌ ಪ್ರಭಾವದಿಂದಾಗಿ ಕರ್ನಾಟಕದ ಕರಾವಳಿ ಹಾಗೂ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರ್ನಾಟಕದಲ್ಲಿ ಪೂರ್ವ ಮುಂಗಾರು ತುಸು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಏ.18ರವರೆಗೆ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನಗಳು ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಮಂಡ್ಯ, ಮೈಸೂರು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top