ಮುಂದಿನ ಎರಡ್ಮೂರು ದಿನ ಕೆಲ‌ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ಕರ್ನಾಟಕದಲ್ಲಿ‌ ಮುಂದಿನ ಎರಡ್ಮೂರು ದಿನ ಕೆಲ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಾವಣಗೆರೆ: ಜಿಲ್ಲೆಯ ಕೆರೆಗಳ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ | 20 ಕೆರೆಗಳ ಒತ್ತುವರಿ ತೆರವು ಬಾಕಿ; ಜಿಲ್ಲಾಧಿಕಾರಿ

ಏಪ್ರಿಲ್ 20 ರವರೆಗೆ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಿಂಚು-ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಒಳನಾಡಿನಲ್ಲಿ ಏ ಗುಡುಗು ಸಹಿತ ಮಳೆ ಮತ್ತು ಬಲವಾದ ಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಬೀಸುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಬಿಸಿಗಾಳಿಯ ವಾತಾವರಣ ಮುಂದುವರಿಯಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮತ್ತು ತಾಪಮಾನದ ಏರಿಳಿತದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಏಪ್ರಿಲ್ 16ರಿಂದ 20ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲೂ ವರುಣನ ಸಿಂಚನವಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ, ಏಪ್ರಿಲ್ 18ರಿಂದ ಕೊಡಗು ಮತ್ತು ಹಾಸನ ಜಿಲ್ಲೆಗಳಿಗೂ ಮಳೆ ವಿಸ್ತರಿಸಲಿದ್ದು, ಏಪ್ರಿಲ್ 19ರಂದು ಮೈಸೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಬಿಸಿಲಿನ ತಾಪದಿಂದ ಅಲ್ಪ ಮಟ್ಟದ ನೆಮ್ಮದಿ ಸಿಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳದಲ್ಲಿ ಆರಂಭದ ಮೂರು ದಿನಗಳ ಕಾಲ ಗುಡುಗು ಸಹಿತ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ರಾಯಚೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಆದರೆ, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಏಪ್ರಿಲ್ 18ರವರೆಗೆ ಬಿಸಿಗಾಳಿ (Heat wave) ಮುಂದುವರಿಯಲಿದ್ದು, ಜನಜೀವನದ ಮೇಲೆ ಪರಿಣಾಮ ಬೀರಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ.

ಶಿವಮೊಗ್ಗದಲ್ಲಿ ಬಿಜೆಪಿ ರಾಘವೇಂದ್ರ ಗೆಲ್ಲಿಸಿ, ಟಿಕೆಟ್ ಘೋಷಣೆ ಮುನ್ನವೇ ನಾಮಪತ್ರ ಸಲ್ಲಿಕೆ; ಇದು ಪಕ್ಷದ‌ ಶಿಸ್ತು ಉಲ್ಲಂಘನೆ ಅಲ್ಲವೇ; ಮಾಜಿ ಸಚಿವ ಕೆ.ಎನ್. ರಾಜಣ್ಣ

ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಉಷ್ಣಾಂಶ ತೀವ್ರವಾಗಿ ಏರಿಕೆಯಾಗಿದ್ದು, ಕಲಬುರಗಿಯಲ್ಲಿ ದಾಖಲೆಯ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *