Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮತ್ತೆ ಮಳೆ ಶುರು; ಎರಡ್ಮೂರು ದಿನ ಭಾರೀ ಮಳೆ; ದಾವಣಗೆರೆ ಯೆಲ್ಲೋ ಅಲರ್ಟ್ ಘೋಷಣೆ

ದಾವಣಗೆರೆ

ರಾಜ್ಯದಲ್ಲಿ ಮತ್ತೆ ಮಳೆ ಶುರು; ಎರಡ್ಮೂರು ದಿನ ಭಾರೀ ಮಳೆ; ದಾವಣಗೆರೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ, ಮತ್ತೆ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ‌ ಮುನ್ಸೂಚನೆ ‌ಕೊಟ್ಟಿದೆ. ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ನಾಳೆಯಿಂದ (ಆ.22) ಮತ್ತೆ ಮಳೆ ಶುರುವಾಗಲಿದೆ. ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡದಲ್ಲಿ ಆ.22ರಿಂದ ಆ.24ರವರೆಗೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಕೋಲಾರದಲ್ಲಿ ಆ.23ರಿಂದ ಮುಂದಿನ ಎರಡು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಮತ್ತು ಚಾಮರಾಜನಗರದಲ್ಲಿ ಆ.24ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top