Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಗುಡುಗು ಸಹಿತ ಮಳೆ; ದಾವಣಗೆರೆ ಯೆಲ್ಲೋ ಅಲರ್ಟ್..!

ಪ್ರಮುಖ ಸುದ್ದಿ

ರಾಜ್ಯದಲ್ಲಿ ಗುಡುಗು ಸಹಿತ ಮಳೆ; ದಾವಣಗೆರೆ ಯೆಲ್ಲೋ ಅಲರ್ಟ್..!

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ಒಂದು ವಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡಿನಲ್ಲೂ ಸೆ.9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ವರುಣನ ಆರ್ಭಟ ಹೆಚ್ಚಿರಲಿದ್ದು, ಕೆಲವೊಂದು ಜಿಲ್ಲೆಗಳಿಗೆ ಇಂದು (ಸೆ.05) ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಹಲವು ಕಡೆಗಳಲ್ಲಿ ಸಾಕಷ್ಟು ಮಹಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಕೋಲಾರ, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top