ದಾವಣಗೆರೆ: ನಿನ್ನೆ ತಡ ರಾತ್ರಿ ವರೆಗೂ ಮಳೆಯಾಗಿದ್ದು, ಇಂದು ಬೆಳಗ್ಗೆಯಿಂದ ಎಲ್ಲೆಡೆ ಮೋಡ ಕವಿದ ವಾತಾವರಣವಿದೆ. ದಾವಣಗೆರೆ ಸೇರಿ 12 ಜಿಲ್ಲೆಗಳಲ್ಲಿ ಇನ್ನು 2 ದಿನಗಳ ಕಾಲ ಮಳೆಯ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎರಡು ದಿನ ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವೆಡೆ ರಾತ್ರಿಯೆಲ್ಲಾ ಮಳೆಯಾಗಿದೆ. ಸದ್ಯ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ.

 
		 
		 
		 
		 
		 
			
 
                                
                             
