Connect with us

Dvgsuddi Kannada | online news portal | Kannada news online

ಅಧಿಕ ತಾಪಮಾನ; ರಾಜ್ಯದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ: ಹವಾಮಾನ ತಜ್ಞರ ಮುನ್ಸೂಚನೆ  

rain22

ಪ್ರಮುಖ ಸುದ್ದಿ

ಅಧಿಕ ತಾಪಮಾನ; ರಾಜ್ಯದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ: ಹವಾಮಾನ ತಜ್ಞರ ಮುನ್ಸೂಚನೆ  

ಬೆಂಗಳೂರು: ಈ ವರ್ಷ ಕರ್ನಾಟಕದಲ್ಲಿ ಅಧಿಕ ತಾಪಮಾನದಿಂದ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾರ್ಚ್ 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಇದು ಹಲವೆಡೆ ಬೆಳೆ ಹಾನಿಗೂ ಕಾರಣವಾಗಿದೆ. ಹಾಗೆಯೇ ದೇಶದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿ ಮಾರ್ಚ್ 15ರ ತನಕ ಹಗುರವಾದ ಮಳೆಯಾಗಲಿದೆ. ಮಾರ್ಚ್ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

1901ರ ಬಳಿಕ ಕಳೆದ ಫೆಬ್ರುವರಿಯಲ್ಲಿ ಅತ್ಯಂತ ಬಿಸಿಲಿನಿಂದ ಕೂಡಿತ್ತು. ಈ ರೀತಿ ಹವಾಮಾನ ವಾತಾವರಣದಿಂದ ಮುಂಗಾರು ಪೂರ್ವ ಮಳೆ ಅವಧಿಗೂ ಮುನ್ನವೇ ಬರಲಿದೆ. ಸಾಮಾನ್ಯವಾಗಿ ಮುಂಗಾರು ಪೂರ್ವ ಮಾರುತಗಳು ಮಾರ್ಚ್ ಮಧ್ಯದಲ್ಲಿ ರಚನೆಯಾಗುತ್ತವೆ. ಈ ವರ್ಷ ಬೇಗ ಸೃಷ್ಟಿಯಾಗಿವೆ. ಹೆಚ್ಚಿರುವ ಉಷ್ಣಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ   ಎಂದು ಸ್ಕೈಮೆಟ್ನ ಹವಾಮಾನ ತಜ್ಞ ಮಹೇಶ್ ಮಲಾವತ್ ಹೇಳಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ, ಪಶ್ಚಿಮ ಹಿಮಾಲಯ, ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ನೈಋತ್ಯ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದ್ದು, ಅಂತೆಯೇ ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಕೇರಳದ ಹಲವೆಡೆಯಲ್ಲೂ ಲಘು ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 14 ರಂದು ಆಗ್ನೇಯ ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಈಶಾನ್ಯ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು ಸಂಭವಿಸಬಹುದು. ಮುಂದಿನ 24 ರಿಂದ 48 ಗಂಟೆಗಳ ಅವಧಿಯಲ್ಲಿ ವಾಯುವ್ಯ ಮಧ್ಯ ಭಾರತದ ಮೇಲೆ ಹಗಲಿನ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕೊಂಕಣದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯಬಹುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top