Connect with us

Dvgsuddi Kannada | online news portal | Kannada news online

ಚಿಕ್ಕಮಗಳೂರು, ಕರಾವಳಿ, ಕೊಡಗಿನಲ್ಲಿ ವರ್ಷದ ಮೊದಲ ಮಳೆ; ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ಚಿಕ್ಕಮಗಳೂರು, ಕರಾವಳಿ, ಕೊಡಗಿನಲ್ಲಿ ವರ್ಷದ ಮೊದಲ ಮಳೆ; ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಕರಾವಳಿ, ಕೊಡಗಿನಲ್ಲಿ ವರ್ಷದ ಮೊದಲ ಮಳೆ ಸುರಿದಿದ್ದು, ಇಂದಿನಿಂದ ರಾಜ್ಯದಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವು ದಿನಗಳಿಂದ ಕಾದ ಕೆಂಡದಂತಾಗಿದ್ದ ಕರಾವಳಿ , ಚಿಕ್ಕಮಗಳೂರು , ಕೊಡಗು ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸುರಿದಿದ್ದು, ವಾತಾವರಣ ತುಸು ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆಯು ಹಲವು ತಿಂಗಳ ಬಳಿಕ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೊಷಿಸಿದೆ.

ಮುನ್ಸೂಚನೆಯ ಪ್ರಕಾರ ಮಾ. 15ರಿಂದ 17ರವರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಅಧಿಕ ಉಷ್ಣಾಂಶಕ್ಕೆ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top