ರಾಜ್ಯದಲ್ಲಿ ಅಕಾಲಿಕ ಮಳೆ ; ಸಿಡಿಲು ಬಡಿದು ಐವರು ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯ ಅಬ್ಬರಿಸುತ್ತಿದೆ. ಇದರಿಂದ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಸಿಡಿಲು ಬಡಿದು ಮೂವರು ಹಾಗೂ ಛಾವಣಿ ಕುಸಿದು ಇಬ್ಬರು ಮೃತಪಟ್ಟಿದ್ದಾರೆ.

ಗದಗ, ಕೊಪ್ಪಳ, ಕಲ್ಬುರ್ಗಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಶುಕ್ರವಾರ ಮಳೆಯಾಗಿದೆ. ಉತ್ತರ ಕನ್ನಡ, ಗದಗ ಜಿಲ್ಲೆಗಳಲ್ಲಿ ಭಾರಿ ಆಲಿಕಲ್ಲು ಸಹಿತ ಮಳೆಯಾಗಿ ಕೆಲವು ಕಡೆ ಬೇಸಿಗೆ ಬೆಳೆಗಳಿಗೆ ಭಾರೀ ಹಾನಿಯಾಗಿದೆ. ಕೊಪ್ಪಳ ಜಿಲ್ಲೆಯ ಕೊಪ್ಪಳ, ಕುಕನೂರು, ಗದಗ ಜಿಲ್ಲೆಯ ಹಲವು ಕಡೆ ಆಲಿಕಲ್ಲು ಸಹಿತ ಮಳೆಯ ಅಬ್ಬರದಿಂದ ಜನ ಜೀವನ ಅಸ್ತವ್ಯಸ್ತಗೊಂಡಿತ್ತು.

ಗದಗ ಜಿಲ್ಲೆಯಲ್ಲಿ ಸಿಡಿಲಿನ ಅಬ್ಬರಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಗದಗ ತಾಲೂಕಿನ ಲಿಂಗದಾಳದಲ್ಲಿ ಕುರಿ ಮೇಯಿಸಲು ಹೋಗಿದ್ದ ಶರಣಪ್ಪ(16), ದೇವೇಂದ್ರಪ್ಪ(16) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಿಲ್ವಾಡ ಬಿ ಗ್ರಾಮದ ರೈತ ಬೋಗಪ್ಪ(60) ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಮಳೆಯಿಂದ ತೇವಗೊಂಡಿದ್ದ ಮನೆಯ ಛಾವಣಿ ಕುಸಿತು ಯಂಕೂಬಾಯಿ ಕುಲಕರ್ಣಿ(79), ಶಾರವ್ವ ಪತ್ತಾರ(58) ಮೃತಪಟ್ಟಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *