Connect with us

Dvgsuddi Kannada | online news portal | Kannada news online

ಹವಾಮಾನ ವೈಪರಿತ್ಯದಿಂದ ಮೇ 6ರಂದು ಚಂಡಮಾರುತ; ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ಹವಾಮಾನ ವೈಪರಿತ್ಯದಿಂದ ಮೇ 6ರಂದು ಚಂಡಮಾರುತ; ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಹವಾಮಾನ ವೈಪರಿತ್ಯ ತೀವ್ರ ಸ್ವರೂಪ ಪಡೆದಿದ್ದು, ಮೇ 6ರಂದು ಬಂಗಾಳಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ ಸೃಷ್ಟಿಯಾಗಲಿದೆ. ಹೀಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ 6ರಂದು ಚಂಡಮಾರುತ’ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ. ಅದರ ಪ್ರಭಾವದಿಂದಲೇ ಮುಂದಿನ 48 ಗಂಟೆಗಳ ಅವಧಿಯಲ್ಲಿ ಬಂಗಾಳಕೊಲ್ಲಿ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿ ವಾಯುಭಾರತ ಕುಸಿತಗೊಳ್ಳಲಿದೆ. ಈಗಾಗಲೇ ಆಗ್ನೇಯ ಭಾಗದಲ್ಲಿ ಗಾಳಿ ಸುತ್ತುವರಿಯುವಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಆಗುತ್ತುರುವ ಮಳೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

ಮುಂದಿನ 120 ಗಂಟೆಗಳವರೆಗೆ ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ. ಅಂಡಮಾನ್ ಸಮುದ್ರ ಮತ್ತು ಬಂಗಾಳದ ಉತ್ತರ ಮತ್ತು ಪೂರ್ವದ ಕೊಲ್ಲಿಯಲ್ಲಿ ಗಾಳಿಯು ದುರ್ಬಲಗೊಂಡಿದ್ದು, ಸೈಕ್ಲೋನ್ ನಿರ್ಮಾಣವಾಗುತ್ತಿದೆ. ಇದರ ಪರಿಣಾಮವಾಗಿ ತಮಿಳುನಾರು, ಪಶ್ಮಿಮ ಬಂಗಾಳ, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಅತ್ಯಧಿಕ ಮಳೆ ಬರಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ತೀವ್ರತೆ ಹೆಚ್ಚಾದರೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಹಾಗೂ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆ ಭಾರೀ‌‌‌ ಮಳೆಯಾಗಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top