ರಾಜ್ಯದಲ್ಲಿ ಬರದ ಛಾಯೆ; ಮುಂಗಾರು ಮಳೆ ಮತ್ತಷ್ಟು ವಿಳಂಬ ಸಾಧ್ಯತೆ; ಶೇ.66 ರಷ್ಟು ಮಳೆ ಕೊರತೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಜೂನ್ 15 ಕಳೆದರೂ ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೆ, ವಿವಿಧ ಜಿಲ್ಲೆಗಳಲ್ಲಿ ಬರದ ಛಾಯೆ ಮೂಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂಗಾರು ಮಳೆ ಮತ್ತಷ್ಟು ತಡವಾಗಲಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಎಂಡಿಸಿ) ಮಾಹಿತಿ ಪ್ರಕಾರ ಜೂನ್ 1 ರಿಂದ 13ರ ತನರ ರಾಜ್ಯದಲ್ಲಿನ ಮಳೆಯ ಕೊರತೆ ಶೇ 66ರಷ್ಟು ಮಳೆ ಕೊರತೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬಿಪೊರ್‌ಜಾಯ್ ಚಂಡಮಾರುತ ಪರಿಣಾಮ ನೈಋತ್ಯ ಮುಂಗಾರು ಮಳೆ ವಿಳಂಬವಾಗಿದೆ. ಚಂಡಮಾರುತದಿಂದ ಮುಂಗಾರು ದುರ್ಬಲವಾಗಿದೆ. ಇನ್ನೂ ಎರಡು ವಾರಗಳ ಕಾಲ ಮಳೆ ವಿಳಂಬವಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜುಲೈನಲ್ಲಿ ಮುಂಗಾರು ಮಳೆಯ ಅಬ್ಬರ ನಿರೀಕ್ಷೆ ಮಾಡಬಹುದಾಗಿದೆ.

ಜೂನ್ ತಿಂಗಳ ಆರಂಭದಲ್ಲಿಯೇ ಅಬ್ಬರಿಸಬೇಕಿದ್ದ ಮುಂಗಾರು ಮಳೆಯ ಸುಳಿವಿಲ್ಲ. ವಿವಿಧ ಜಿಲ್ಲೆಗಳಲ್ಲಿ ಮಳೆ ಇಲ್ಲದೇ ಕುಡಿಯುವ ನೀರಿಗೂ ಸಹ ಕೊರತೆ ಉಂಟಾಗಿದೆ.ಕೆಎಸ್‌ಎನ್‌ಎಂಡಿಸಿ ಮಾಹಿತಿ ಪ್ರಕಾರ ಜೂನ್ 1 ರಿಂದ 13ರ ತನರ ರಾಜ್ಯದಲ್ಲಿನ ಮಳೆಯ ಕೊರತೆ ಶೇ 66. ಈ ಅವಧಿಯಲ್ಲಿ ವಾಡಿಕೆಯಂತೆ 70 ಮಿ. ಮೀ. ಮಳೆಯಾಗಬೇಕಿತ್ತು. ಆದರೆ ಕೇವಲ 24 ಮಿ. ಮೀ. ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ 44, ಉತ್ತರ ಒಳನಾಡು ಶೇ 58, ಮಲೆನಾಡಿನಲ್ಲಿ ಶೇ 78 ಹಾಗೂ ಕರಾವಳಿಯಲ್ಲಿ ಶೇ 73ರಷ್ಟು ವಾಡಿಕೆಗಿಂತ ಮಳೆ ಕೊರತೆ ಇದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *