Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿಂದು ಹಲವು ಕಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ರಾಜ್ಯದಲ್ಲಿಂದು ಹಲವು ಕಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬೀಸಮುದ್ರ ಎರಡು ಕಡೆಯಿಂದಲೂ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು, ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಧ್ಯ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ವಾಯುಭಾರ ಕುಸಿತದಿಂದಾಗಿ ಫೆ.23ರಂದು ಬೆಂಗಳೂರು ಸೇರಿ ಹಲವೆಡೆ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ,ಕಲಬುರಗಿ,ಕೊಪ್ಪಳ,ರಾಯಚೂರು,ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ,ಕೊಡಗು,ಹಾಸನ, ಕೋಲಾರ, ಮಂಡ್ಯ,ರಾಮನಗರ,ಮೈಸೂರು,ಶಿವಮೊಗ್ಗ,ತುಮಕೂರಿನಲ್ಲಿ ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top