ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಫೆ.18ರಿಂದ ಫೆ.21ರವರೆಗೆ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಫೆ.19ರಿಂದ ಫೆ.21ರ ವರೆಗೆ 20ರಿಂದ 25 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಫೆ.20ರ ವರೆಗೆ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ.ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 13 ಡಿ. ಸೆಲ್ಸಿಯಸ್ ದಾಖಲಾಗಿದೆ.

ಕರಾವಳಿ ಭಾಗದಲ್ಲಿ ಗರಿಷ್ಠ 31ರಿಂದ 32ಡಿ.ಸೆಲ್ಸಿಯಸ್ ಹಾಗೂ ಕನಿಷ್ಠ 21ರಿಂದ 23 ಡಿ.ಸೆಲ್ಸಿಯಸ್ ದಾಖಲಾಗಿತ್ತು. ಉತ್ತರ ಒಳನಾಡಿನಲ್ಲಿ ಗರಿಷ್ಠ 30ರಿಂದ 32 ಡಿ. ಸೆಲ್ಸಿಯಸ್, ಕಲುಬುರಗಿಯಲ್ಲಿ 34ರಿಂದ 35 ಡಿ.ಸೆಲ್ಸಿಯಸ್, ದಾವಣಗೆರೆಯಲ್ಲಿ 13 ಡಿ. ಸೆ.,ಬೆಳಗಾವಿಯಲ್ಲಿ 15 ಹಾಗೂ ಬೆಂಗಳೂರಿನಲ್ಲಿ ಕನಿಷ್ಠ 14 ಡಿ.ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 32 ಡಿ.ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿ.ಸೆಲ್ಸಿಯಸ್ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *