ರಾಮನಗರ: ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ, ಟ್ರಾಲಿ ಪಲ್ಟಿಯಾಗದ ಪರಿಣಾಮ ಕನಕಪುರ ತಾಲೂಕಿನ 6 ಮಂದಿ ಮೃತಪಟ್ಟಿದ್ದಾರೆ. 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕನಕಪುರ-ತಮಿಳುನಾಡು ಗಡಿಭಾಗದಲ್ಲಿ ಇಂದು ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವರು ಜಿಲ್ಲೆಯ ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದವರಾಗಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ 8 ಮಂದಿಯನ್ನು ತಮಿಳುನಾಡಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆರಳಾಳುಸಂದ್ರದ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಾಗುಳೇಶ್ವರ ದೇವಾಲಯಕ್ಕೆ ತೆರಳಳುತ್ತಿದ್ದರು. ಈ ವೇಳೆ ಕನಕಪುರ – ತಮಿಳುನಾಡಿನ ಗಡಿ ಭಾಗದಲ್ಲಿ ಟ್ರ್ಯಾಕ್ಟರ್ ನ ಬ್ರೇಕ್ ವೈಫಲ್ಯಗೊಂಡಿದೆ.
ವೇಗವಾಗಿ ಸಂಚರಿಸುತ್ತಿದ್ದ ಟ್ರ್ಯಾಕ್ಟರ್ ರಸ್ತೆ ತಿರುವುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ. ಈ ವೇಳೆ ಸ್ಥಳದಲ್ಲೇ ಆರು ಮಂದಿ ಮೃತ ಪಟ್ಟಿದ್ದು, ಎಂಟು ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.



