ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಧರಣಿ ನಡೆಸುತ್ತಿವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷದವರು ಕಾಲಹರಣ ಮಾಡುತ್ತಿವೆ ಕಿಡಿಕಾರಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ಕೂಡ ನಡೆಸಲಾಗುತ್ತಿದೆ. ಆ ಯುವತಿ ಇದುವರೆಗೂ, ಬಂದು ಸ್ಪಷ್ಟ ದೂರು ನೀಡುತ್ತಿಲ್ಲ. ದೂರು ನೀಡಿದರೆ ಪ್ರಕರಣಕ್ಕೆ ಒಂದು ಅಂತ್ಯ ಸಿಗುತ್ತದೆ. ಆದರೂ ಕೂಡ ವಿಪಕ್ಷ ನಾಯಕರು ಧರಣಿ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಕುಂಟು ನೆಪ ಹೇಳಿ ನಿನ್ನೆ ಸದನದಲ್ಲಿ ಧರಣಿ ಮಾಡಿದರು. ಪ್ರಕರಣದ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದೇವೆ. ವಿಪಕ್ಷದವರಿಗೆ ಚರ್ಚಿಸಲು ಬೇರೆ ವಿಷಯವಿಲ್ಲದೇ ಕಾಲಹರಣ ಮಾಡುತ್ತಿದ್ದಾರೆ. ಸುಗಮ ಕಲಾಪಕ್ಕೆ ಅವಕಾಶ ನೀಡಬೇಕು ಎಂದು ಸಿಎಂ ಹೇಳಿದರು.



