ಸಿಡಿ ಪ್ರಕರಣ: ಯುವತಿಗೆ  ಡಿ.ಕೆ. ಶಿವಕುಮಾರ್ ಹೆಸರು ಹೇಳಿ ಅಂತಾ ನಾವು ಹೇಳಿದ್ದವಾ..?: ಸಚಿವ ಎಸ್.ಟಿ. ಸೋಮಶೇಖರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮೈಸೂರು: ಸಿಡಿ ಪ್ರಕರಣದಲ್ಲಿ ಡಿ ಕೆ ಶಿವಕುಮಾರ್ ಅವರ ಹೆಸರು ಬಂದಿದ್ದರಲ್ಲಿ ನನಗೇನು ಅಚ್ಚರಿ ಅನಿಸಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಮೊದಲೇ ಇದು ಚರ್ಚೆಯಲ್ಲಿತ್ತು. ಈಗ ಅದು ಹೊರಗೆ ಬಂದಿದೆ ಅಷ್ಟೇ. ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹೇಳಿ ಅಂತಾ ನಾವು ಹೇಳಿಕೊಟ್ಟಿದ್ದವಾ….? ಆ ಯುವತಿಯೇ ಹೇಳಿದ್ದಾಳೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಹೆಸರು ಹೇಳು ಎಂದು ನಾವೆನಾದರು ಹೇಳಿದ್ದೇವಾ? ಆಕೆಯೇ ತಾನಾಗಿಯೇ ಆ ಹೆಸರು ಹೇಳಿದ್ದಾಳೆ. ಅಲ್ಲಿಗೆ ಇದರ ಅರ್ಥ ಏನು ಎಂದು ಪ್ರಶ್ನಿಸಿದ್ದಾರೆ.

ಸಿಡಿ ಪ್ರಕರಣದಲ್ಲಿ ಮಹಾನಾಯಕನ ಪಾತ್ರ ಇದೆ ಎನ್ನುವುದು ಚರ್ಚೆಯಲ್ಲಿದೆ. ಸಂತ್ರಸ್ತೆಯೇ ಅವರ ಹೆಸರು ಹೇಳಿದ್ದಾಳೆ. ನಾವೇನು ಅವರ ಹೆಸರು ಹೇಳಿ ಎಂದು ಹೇಳಿದ್ದೇವಾ? ಯಾರಾದರೂ ಅವರ ಹೆಸರು ಹೇಳಿ ಎಂದು ಹೇಳಿಕೊಟ್ಟಿದ್ದಾರಾ? ಆತ ಯಾರು ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ನಮಗೂ ಇತ್ತು. ಡಿಕೆಶಿಯೇ ಮಹಾನಾಯಕನೆಂಬ ಪ್ರಶ್ನೆಗೆ ಈಗ ಅವರ ಹೆಸರು ಬಂದಿದೆ ಅಷ್ಟೇ. ಮಹಾನಾಯಕ ಯಾರು ಅಂತ ಸದ್ಯದಲ್ಲೇ ಗೊತ್ತಾಗಲಿದೆ ಎಂದರು.

ಇಡೀ ಪ್ರಕರಣದಲ್ಲಿ ರಾಜಕಾರಣಿಗಳು, ಮಂತ್ರಿಗಳು ಟಾರ್ಗೆಟ್ ಆಗುತ್ತಿದ್ದಾರೆ. ಹಾಗಾಗಿ ಈ ಪ್ರಕರಣದ ಮಹಾನಾಯಕ ಯಾರು ಎಂಬ ಸತ್ಯಾಸತ್ಯತೆ ಹೊರಗೆ ಬರಲೇಬೇಕು. ಯುವತಿ ಎಲ್ಲಿಯೇ ಬಂದು ಹೇಳಿಕೆ‌ ನೀಡಿದರೂ ಆಕೆಗೆ ರಕ್ಷಣೆ ನೀಡಲು ಕರ್ನಾಟಕ ಸರ್ಕಾರ ಹಾಗೂ ಪೊಲೀಸ್ ಬದ್ದವಾಗಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.

ಆರು ಸಚಿವರು ಕೋರ್ಟ್ ಗೆ ಹೋಗಿರುವ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರವಾಗಿ ಉಪಚುನಾವಣೆ ಪ್ರಚಾರದಿಂದ ದೂರ ಇರಲು ಸಿಎಂ ಹೇಳಿಲ್ಲ. ನನಗೆ ಸದ್ಯ ಊಟಿಗೆ ಉಸ್ತುವಾರಿ ನೀಡಲಾಗಿದೆ. ನಂತರ ಮಸ್ಕಿಗೆ ನೇಮಕ ಮಾಡಲಾಗಿದೆ. ಪ್ರಚಾರದಿಂದ ದೂರ ಇರಿ ಎಂಬುದೆಲ್ಲ ಕಪೋಲಕಲ್ಪಿತ ಸುದ್ದಿ. ನಮಗೆ ಈ ಬಗ್ಗೆ ಸಿಎಂ ಯಾವ ಸೂಚನೆ ನೀಡಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *