Connect with us

Dvgsuddi Kannada | online news portal | Kannada news online

ಬಿಪಿಎಲ್ ಕಾರ್ಡ್ ತಿದ್ದುಪಡಿ ಮಾಡಿಸಬೇಕಾ…?: ದಾವಣಗೆರೆ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರೇಷನ್ ಕಾರ್ಡ್ ತಿದ್ದುಪಡೆಗೆ ಅವಕಾಶ…!!!!

ಪ್ರಮುಖ ಸುದ್ದಿ

ಬಿಪಿಎಲ್ ಕಾರ್ಡ್ ತಿದ್ದುಪಡಿ ಮಾಡಿಸಬೇಕಾ…?: ದಾವಣಗೆರೆ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರೇಷನ್ ಕಾರ್ಡ್ ತಿದ್ದುಪಡೆಗೆ ಅವಕಾಶ…!!!!

ಬೆಂಗಳೂರು: ಆಹಾರ ಇಲಾಖೆಯು ಬಿಪಿಎಲ್, ಎಪಿಎಲ್  ಕಾರ್ಡ್ (APL,BPL Card) ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದೆ.‌ ಹೆಸರು ಬದಲಾವಣೆ, ಕೇಂದ್ರ ಬದಲಾವಣೆ, ಕಾರ್ಡ್‌ ಸದಸ್ಯರ ಹೆಸರು ತೆಗೆಸುವುದು, ಸೇರಿಸುವುದು, ಕಾರ್ಡಿನ ಮುಖ್ಯಸ್ಥರ ಹೆಸರು ಬದಲಾವಣೆ ಸೇರಿದಂತೆ ಕೆಲವು ತಿದ್ದುಪಡಿಯನ್ನು ಮಾಡಿಕೊಳ್ಳಬಹುದು. ದಾವಣಗೆರೆಯಲ್ಲಿ‌ ಇಂದಿನಿಂದ ಮೂರು ದಿನ ತಿದ್ದುಪಡಿಗೆ ಅವಕಾಶವಿದೆ.

ಸರ್ಕಾರದ ಕೆಲವು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ತೊಂದರೆಯಾಗುತ್ತಿರುವ ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆ ನಿರ್ಧಾರ ತೆಗೆದುಕೊಂಡಿದೆ. ದಾವಣಗೆರೆ ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ಈ ತಿದ್ದುಪಡಿಯು ಜಿಲ್ಲಾವಾರು ದಿನಾಂಕ ನಿಗದಿಪಡಿಸಿದ್ದು, ಮೂರು ಹಂತಗಳಲ್ಲಿ ನಡೆಯಲಿದೆ.

ಈಗಾಗಲೇ ಎರಡು ಹಂತ ಮುಗಿದಿದ್ದು 3ನೇ ಹಂತ ಇಂದಿನಿಂದ (ಅ.11 ರಿಂದ ಅ.13ರ ವರೆಗೆ) ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಿಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top