Connect with us

Dvgsuddi Kannada | online news portal | Kannada news online

ಆರ್ ಟಿ ಇ ಸೀಟು ಹಂಚಿಕೆ ಆರಂಭ; ಏ.16 ರಂದು ದಾಖಲಾತಿ ಸಲ್ಲಿಸಲು ಕೊನೆಯ ದಿನ

ಪ್ರಮುಖ ಸುದ್ದಿ

ಆರ್ ಟಿ ಇ ಸೀಟು ಹಂಚಿಕೆ ಆರಂಭ; ಏ.16 ರಂದು ದಾಖಲಾತಿ ಸಲ್ಲಿಸಲು ಕೊನೆಯ ದಿನ

ಬೆಂಗಳೂರು: ಆರ್ ಟಿ ಇ ಅಡಿ ಮೊದಲ ಸುತ್ತಿನ ಸೀಟು ಹಂಚಿಕೆ ಆರಂಭವಾಗಿದ್ದು, ಏಪ್ರಿಲ್ 16 ರಂದು ದಾಖಲಾತಿ ಸಲ್ಲಿಸಲು ಕೊನೆಯ ದಿನವಾಗಿದೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ ಆರ್ ಟಿಇ ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಸುಮಾರು 20,414 ಅರ್ಜಿಗಳು ಬಂದಿದ್ದವು.‌ ಅದರಲ್ಲಿ ಅರ್ಹ 19,718 ಅರ್ಜಿಗಳನ್ನು ಮೊದಲ ಸುತ್ತಿನ ಲಾಟರಿಗೆ ಪರಿಗಣಿಸಲಾಗಿದೆ.‌

ಮೊದಲನೇ ಸುತ್ತಿನ ಲಾಟರಿಯನ್ನು ಇಂದು ಆನ್‌ಲೈನ್ ಮೂಲಕ ನಡೆಸಲಾಗಿದ್ದು, ಈ ಪ್ರಕ್ರಿಯೆಯಲ್ಲಿ 7,596 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. 696 ಅರ್ಜಿಗಳನ್ನ ರಿಜೆಕ್ಟ್ ಮಾಡಲಾಗಿದೆ. ಈಗಾಗಲೇ ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್​​ಎಂಎಸ್ ಮೂಲಕ ಸೀಟು ಹಂಚಿಕೆ ಮಾಹಿತಿಯನ್ನು ನೀಡಲಾಗಿದೆ.

ಎಲ್ಲಾ ಪೋಷಕರು ಏಪ್ರಿಲ್ 5 ರಿಂದ 16 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ದಾಖಲಾತಿ ಮಾಡಲು ಶಿಕ್ಷಣ ಇಲಾಖೆ ತಿಳಿಸಿದೆ.‌ ಇನ್ನು ಸೀಟು ಹಂಚಿಕೆ ವಿವರ ಇಲಾಖಾ ವೆಬ್​ಸೈಟ್ (www.schooleducation.kar.nic.in) ಭೇಟಿ ನೀಡಬಹುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top