ಕಲಬುರಗಿ: ಈ ಬಾರಿಯ (2024- 25) ಮುಂಗಾರು ಹಂಗಾಮಿನಲ್ಲಿ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಬೆಳೆಗೆ ಮೊದಲ ಕಂತಿನ ಪರಿಹಾರ ಮೊತ್ತ ಮಂಜೂರಾಗಿದೆ. ಮೂರ್ನಾಲ್ಕು ದಿನದಲ್ಲಿ ಇನ್ಪುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
- 33,718 ರೈತರಿಗೆ 13.2 ಕೋಟಿ ರೂ. ಮಂಜೂರು
- ಮೂರ್ನಾಲ್ಕು ದಿನದಲ್ಲಿ ಇನ್ಪುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆ
- ಗ್ರಾಮ ಆಡಳಿತ ಅಧಿಕಾರಿಗಳಿಂದ ಹಾನಿಯ ವರದಿ
ಮೊದಲ ಕಂತಿನ ಪರಿಹಾರ 13.2 ಕೋಟಿ: ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ. ಮುಂಗಾರು ಹಂಗಾಮಿನ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರ 13.2 ಕೋಟಿ ರೂ. ಇನ್ಪುಟ್ ಸಬ್ಸಿಡಿ ಮಂಜೂರಾಗಿದೆ.ಹಾನಿಯಾದ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ಸಲ್ಲಿಸಿದ್ದಾರೆ.
ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ. ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಗ್ರಾಮೀಣ ಭಾಗದ ಪ್ರತಿ ಮನೆಗೆ ಇ-ಸ್ವತ್ತು ತಲುಪಿಸುವ ಹೊಣೆ ಪಿಡಿಒಗಳಿಗೆ