Connect with us

Dvgsuddi Kannada | online news portal | Kannada news online

ಇನ್ಮುಂದೆ ಸರ್ಕಾರದಿಂದ ಪ್ರತಿ ತಿಂಗಳು ಸಪ್ತಪದಿ ವಿವಾಹ ಕಾರ್ಯಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪ್ರಮುಖ ಸುದ್ದಿ

ಇನ್ಮುಂದೆ ಸರ್ಕಾರದಿಂದ ಪ್ರತಿ ತಿಂಗಳು ಸಪ್ತಪದಿ ವಿವಾಹ ಕಾರ್ಯಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೋವಿಡ್ ಕಾರಣದಿಂದ ಸ್ಥಗಿತವಾಗಿದ್ದ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ ಇನ್ಮುಂದೆ ಪ್ರತಿ ತಿಂಗಳು ನಡೆಯಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜನವರಿಯಲ್ಲಿ ವಿವಾಹಕ್ಕೆ ಎರಡು ದಿನಾಂಕ ನಿಗದಿ ಪಡಿಸಲಾಗಿದೆ. ಇನ್ಮುಂದೆ ವಾರ್ಷಿಕದ ಬದಲು ಪ್ರತಿ ತಿಂಗಳು ಸಪ್ತಪದಿ ಕಾರ್ಯಕ್ರಮ ನಡೆಸಲು ಸರ್ಕಾರ ಚಿಂತಿಸಿದೆ ಎಂದು ತಿಳಿಸಿದರು.

ಲವ್ ಜಿಹಾದ್ ನಿಯಂತ್ರಣಕ್ಕೆ ಕಾಯಿದೆ ತರಲು ರಾಜ್ಯ ಸರಕಾರ ಹಾಗೂ ಪಕ್ಷ ಈಗಾಗಲೇ ನಿರ್ಧಾರ ಮಾಡಿದೆ.  ಸುಗ್ರಿವಾಜ್ಞೆ ಮೂಲಕ ಜಾರಿಗೆ ತರುತ್ತಿಲ್ಲ. ಆ ಕಾಯಿದೆ ಮೂಲಕವೇ ತರಬೇಕು ಎಂಬುದು ನಮ್ಮ ಪಕ್ಷ, ಸಾರ್ವಜಕರ ಆಶಯ ವಾಗಿದೆ ಎಂದು ಅವರು ತಿಳಿಸಿದರು.

ವಿಧಾನ ಪರಿಷತ್ ಸಭಾಪತಿ ಸ್ಥಾನದ ಬಗ್ಗೆ ಎಲ್ಲರಿಗೂ ಗೌರವ ಇದೆ. ಆದರೆ ಕಾಂಗ್ರೆಸಿನವರು ಅದನ್ನು ಕಾಂಗ್ರೆಸಿಕರಣಗೊಳಿಸಿ ರಾಜಕಾರಣ ಮಾಡಿರುವುದ ರಿಂದ ಇಂದು ಎಲ್ಲ ರೀತಿಯ ಗೊಂದಲಗಳು ಸೃಷ್ಠಿಯಾಗಿವೆ. ಇದಕ್ಕೆ ನೇರವಾಗಿ ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ.  ಕಾಂಗ್ರೆಸ್‌ನವರು ಸಭಾಪತಿ ಮೇಲೆ ಒತ್ತಡ ತಂದು ಈ ಗೊಂದಲಕ್ಕೆ ಉಂಟು ಮಾಡಿದ್ದಾರೆ. ರಾಜಧರ್ಮವನ್ನು ಪಾಲಿಸ ಬೇಕಾದ ಕಾಂಗ್ರೆಸ್, ಸಭಾಪತಿ ಅವರ ಕೈಯನ್ನು ಕಟ್ಟಿ ಹಾಕಿ, ಅವಿಶ್ವನಾಸ ಗೊತ್ತುವಳಿ ಆಗದಂತೆ ನೋಡಿಕೊಂಡಿದೆ ಎಂದ ಅವರು, ಸಭಾಪತಿ ಯಾರು ಆಗಬೇಕು ಎಂಬುದನ್ನು ಬಿಜೆಪಿ ಪಕ್ಷ ತೀರ್ಮಾನ ಮಾಡುತ್ತದೆ. ಜೆಡಿಎಸ್ ಬೆಂಬಲ ನೀಡಿದರೂ ಕೂಡ ಎಲ್ಲವೂ ಪಕ್ಷದ ಅಧ್ಯಕ್ಷರು, ವರಿಷ್ಠರು, ಮುಖ್ಯ ಮಂತ್ರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top