ಮಹಿಳೆಯರಿಗೆ ಶಾಕ್; ಫ್ರೀ ಬಸ್ ಯೋಜನೆ ಪರಿಷ್ಕರಣೆ….? ; ಈ ಬಗ್ಗೆ ಡಿಸಿಎಂ ಸುಳಿವು..!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಮೂಲಕ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ‌, ಪಂಚ ಯೋಜನೆಗಳಲ್ಲಿ ಒಂದಾದ ಮಹಿಳೆಗೆ ಫ್ರೀ ಬಸ್ ಸೇವೆಯನ್ನು ಎಲ್ಲಾ ಮಹಿಳೆಯರಿಗೂ ಕಲ್ಪಿಸಿತ್ತು. ಇದರಿಂದ ಸಾಮಾನ್ಯ ಬಸ್ ಗಳಲ್ಲಿ ಎಲ್ಲಾ ಮಹಿಳೆಯರು ಉಚಿತ ಪ್ರಯಾಣಕ್ಕೆ ಅವಕಾಶವಿತ್ತು. ಇದೀಗ ಇಂತಹ ಮಹತ್ವದ ಯೋಜನೆ ಫಲಾನುಭಗಳಾದ ಮಹಿಳೆಯರಿಗೆ ಬಿಗ್ ಶಾಕ್ ಎದುರಾಗಿದ್ದು, ಉಚಿತ ಪ್ರಯಾಣಕ್ಕೆ ಬ್ರೇಕ್ ಹಾಕಲು ಸರರ್ಕಾರ ಮುಂದಾಗಿದೆ ಎಂಬ ಸುಳುವು ನೀಡಿದೆ.

ಈ ಕುರಿತು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಶಕ್ತಿ ಯೋಜನೆ ಪರಿಷ್ಕರಣೆ ಆಗುವ ಕುರಿತು ಡಿಸಿಎಂ ಮಾಹಿತಿ ನೀಡಿದ್ದಾರೆ. ವಿಧಾನಸೌಧದ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ, ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ನಾವು ಬಸ್ ಗಳಲ್ಲಿ ಹಣ ಕೊಡಲು ತಯಾರಿದ್ದರೂ ಸ್ವೀಕರಿಸುತ್ತಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಶೀಘ್ರವೇ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ ಗಳು ಹಣ ಸ್ವೀಕರಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್ ದುಡ್ಡು ಕೊಡುತ್ತೇವೆ ಆದರೆ ಬಸ್ ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಈ ಕುರಿತು ಸದ್ಯದಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಡಿಸಿಎಂ ತಮ್ಮ ಎಕ್ಸ್ ಖಾತೆಯಲ್ಲಿಯೂ ಮಾಹಿತಿ ಹಂಚಿಕೊಂಡಿದ್ದಾರೆ.

 

IMG 20241030 174748

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *