ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಲವು ಯೋಜನ್ಗೆಳನ್ನು ಜಾರಿಗೊಳಿಸಿದ್ದು, ಈ ಹಿಂದೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸ್ಥಗಿತಗೊಂಡ ಯೋಜನೆಗಳನ್ನು ಮುಂದುವರಿಸಲು ನಿರ್ಧರಿಸಲಾಗಿದೆ.ಈ ಯೋಜನೆಗೆ 60 ಕೋಟಿ ಅನುದಾನ ನೀಡಲಾಗಿದೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಿದ ಅನುದಾನ
- ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷೀಣ ಕನ್ನಡ ಜಿಲ್ಲೆಗಳಲ್ಲಿ, ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು 4 ಕೋಟಿ ವೆಚ್ಚದಲ್ಲಿ ಪ್ರಾರಂಭ
- ಸ್ವಾವಲಂಬಿ ಸಾರಥಿ ಯೋಜನೆ ಅಡಿ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕರಿಗೆ 4 ಚಕ್ರ ವಾಹನ ಖರೀದಿಸಲು 3ಲಕ್ಷ ರೂ. ಸಹಾಯಧನ
- ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ 2 ಬಡ್ಡಿ ದರದಲ್ಲಿ ಸಾಲ
- ಐದು ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಸ್ಥಾಪನೆ
- -ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆ ಎ ಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ
- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷದ ವರಗೆ ಸಾಲ
- ಜೈನರ ಪ್ರಮುಖ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ಅನುದಾನ
- ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100ಕೋಟಿ ಅನುದಾನ
- ಹಜ್ ಭವನದಲ್ಲಿ ಅಲ್ಪಸಂಖ್ಯಾತ ಯುವಕರಿಗೆ 10 ತಿಂಗಳ ಕಾಲ ವಸತಿ ಸಹಿತ ಐ ಎ ಎಸ್,ಕೆ ಎ ಎಸ್ ತರಬೇತಿಗಳನ್ನ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಪ್ರಾರಂಭಪ್ರಾರಂಭ
- ಹಲಸೂರಿನಲ್ಲಿರುವ ಗುರುದ್ವಾರ ದ ಅಭಿವೃದ್ಧಿ ಗೆ 25 ಕೋಟಿ ಅನುದಾನ



