ಹಾವೇರಿ: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು ಹಾಗೂ ಶಿಗ್ಗಾಂವಿಯ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73) ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬುಧವಾರ ಮಧ್ಯರಾತ್ರಿ 2.45ರ ಸುಮಾರಿಗೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸೊಲಬಕ್ಕನವರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
ಅಂತರರಾಷ್ಟ್ರೀಯ ಕಲಾವಿದರಾಗಿ ಖ್ಯಾತರಾಗಿದ್ದ ಸೊಲಬಕ್ಕನವರ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಬಂದಿವೆ. ಬೆಂಗಳೂರಿನ ಜಕ್ಕೂರಿನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಮಾದರಿ ಗ್ರಾಮದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದರು.
ಸೊಲಬಕ್ಕನವರ ಅವರು ಪತ್ನಿ ಸಾವಿತ್ರಮ್ಮ, ಮಗ ರಾಜಹರ್ಷ, ಮಗಳು ವೇದಾರಾಣಿ ಹಾಗೂ ಅಳಿಯ ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ. ಮೃತರ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ದುಂಡಸಿ ಗ್ರಾಮದ ಸಮೀಪದ ಜಮೀನಿನಲ್ಲಿ ನೆರವೇರಿದೆ.



