SSLC , PUC. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಇನ್ಮುಂದೆ ಪಾಸ್ ಆಗಲು ಶೇ. 33 ಅಂಕ ಪಡೆದ್ರೆ ಸಾಕು.!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಗುಡ್​ ನ್ಯೂಸ್​ ಕೊಟ್ಟಿದೆ. ಸಾರ್ವಜನಿಕ ಅಭಿಪ್ರಾಯ ಪಡೆದು ಪಾಸ್ ಮಾರ್ಕ್ಸ್ ಅಂಕ ಕಡಿತಗೊಳಿಸಿದ್ದು, 35ರಿಂದ 33%ಕ್ಕೆ ಇಳಿಕೆ ಮಾಡಿದೆ.

ಪಿಯುಸಿಯಲ್ಲಿ 600ಕ್ಕೆ 198 ಪಡೆದ್ರೆ ಪಾಸ್

ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 198 ಅಂಕ ಮತ್ತು SSLCಯಲ್ಲಿ 625ಕ್ಕೆ ಕನಿಷ್ಠ 206 ಅಂಕ ಗಳಿಸಿದರೆ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ದ್ವಿತೀಯ ಪಿಯುಸಿ (II PUC): 600 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (210 ಅಂಕಗಳು) ಪಡೆಯಬೇಕಿತ್ತು. ಹೊಸ (2025-26) ನಿಯಮದಂತೆ, 600 ಅಂಕಗಳಿಗೆ ಕನಿಷ್ಟ 198 ಅಂಕ (ಶೇ. 33) ಪಡೆದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಆಂತರಿಕ ಅಂಕ ಸೇರಿ 30 ಅಂಕ ಬರುವುದು ಕಡ್ಡಾಯ.

ಕನಿಷ್ಠ 30 ಅಂಕ ಕಡ್ಡಾಯ

ಹೊಸ ನಿಯಮದ ಪ್ರಕಾರ ಲಿಖಿತ ಹಾಗೂ ಆಂತರಿಕ ಅಂಕ ಸೇರಿ ಪಿಯುಸಿಯಲ್ಲಿ ಪ್ರತಿ ವಿಷಯದಲ್ಲೂ ಕನಿಷ್ಠ 30 ಅಂಕ ಕಡ್ಡಾಯವಾಗಿರಲಿದೆ. SSLC ಪರೀಕ್ಷೆಯಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 30 ಅಂಕ ಪಡೆದರೆ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ.

ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಕ್ರಮ

ಪಾಸಿಂಗ್ ಮಾರ್ಕ್ಸ್ ಕಡಿತ ವಿಚಾರವಾಗಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆ ಪೈಕಿ ಶೇಕಡಾ 33ರಷ್ಟು ಪರವಾಗಿ 701 ಪತ್ರ ಮತ್ತು ಶೇ.35ರಷ್ಟು ಪರವಾಗಿ 8 ಪತ್ರಗಳು ಬಂದಿದ್ದವು. ಹೀಗಾಗಿ 2025-26ನೇ ಸಾಲಿನಿಂದ SSLCಯಲ್ಲಿ ಪ್ರಥಮ ಭಾಷೆ ಹೊರತುಪಡಿಸಿ ಶೇ. 33 ಫಲಿತಾಂಶ ಬಂದರೆ ವಿದ್ಯಾರ್ಥಿಗಳು ಪಾಸ್​ ಆಗಲಿದ್ದಾರೆ.

ಪ್ರಥಮ ಭಾಷೆ 125ರಿಂದ 100ಕ್ಕೆ ಇಳಿಸುವ ಬಗ್ಗೆ ಚರ್ಚೆ

ಪ್ರಥಮ ಭಾಷೆ ಗರಿಷ್ಠ ಅಂಕವನ್ನು 125ರಿಂದ 100ಕ್ಕೆ ಇಳಿಸುವ ವಿಚಾರದ ಬಗ್ಗೆಯೂ ಚರ್ಚೆಯಾಗಿದ್ದು, ಇದು ಇನ್ನೂ ಅಂತಿಮವಾಗಿಲ್ಲ. ಸಾರ್ವಜನಿಕರ ಅಭಿಪ್ರಾಯ ಪಡೆದೇ ಈ ಬಗ್ಗೆ ತೀರ್ಮಾನಿಸಲಾಗುತ್ತೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಈ ವರ್ಷದಿಂದಲ್ಲೇ ಈ ನೂತನ ನಿಯಮ ಜಾರಿ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಈ ನೂತನ ನಿಯಮವು ಜಾರಿಗೆ ಬರಲಿದ್ದು, ಪರೀಕ್ಷೆಗೆ ಹಾಜರಾಗುವ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾಥಿಗಳಿಬ್ಬರಿಗೂ ಅನ್ವಯವಾಗಲಿದೆ. ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್​ ಸಿ ಹಾಗೂ ನೆರೆ ರಾಜ್ಯಗಳಲ್ಲಿರುವ ಮಾನದಂಡಗಳನ್ನು ನಮ್ಮಲ್ಲೂ ಜಾರಿಗೆ ತರುವ ಉದ್ದೇಶದ ಹಿನ್ನಲೆ ಈ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಹೊಸ ನಿಯಮದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಮತ್ತು SSLC ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *